ಮನೆ ಅಪರಾಧ ಮಂಡ್ಯದಲ್ಲೊಂದು ವಿಚಿತ್ರ ಘಟನೆ: ಅಪಹರಿಸಿ ಕೊಲೆ ಮಾಡಿದ್ದಾರೆಂದು ಬಿಂಬಿಸಿದ್ದ ವ್ಯಕ್ತಿ ಪತ್ತೆ

ಮಂಡ್ಯದಲ್ಲೊಂದು ವಿಚಿತ್ರ ಘಟನೆ: ಅಪಹರಿಸಿ ಕೊಲೆ ಮಾಡಿದ್ದಾರೆಂದು ಬಿಂಬಿಸಿದ್ದ ವ್ಯಕ್ತಿ ಪತ್ತೆ

0

ಮಂಡ್ಯ(Mandya): ತನ್ನನ್ನು ಅಪಹರಿಸಿ ಕೊಲೆ ಮಾಡಿದ್ದಾರೆಂದು ಬಿಂಬಿಸಿ ವ್ಯಕ್ತಿಯೋರ್ವ ಗೋವಾ ಪ್ರವಾಸಕ್ಕೆ ಹೋಗಿದ್ದ ವಿಚಿತ್ರ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಚೊಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮನು ಎಂಬ ಯುವಕ ಕೊಲೆಯಾಗಿದ ರೀತಿ ಬಿಂಬಿಸಿಕೊಂಡಿದ್ದನು. ‌ ಈತನನ್ನು ಬೆಂಗಳೂರಿನಲ್ಲಿ ಮಂಡ್ಯ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಮನು ಎಲ್ಲರಿಗೂ ತಾನು ಕೊಲೆಯಾದ ರೀತಿ ನಂಬಿಸಲು ಮನೆಯಲ್ಲಿ ಕೋಳಿ ರಕ್ತ ಚೆಲ್ಲಿ ವಿಗ್ ಎಸೆದಿದ್ದ. ಬಳಿಕ ನಾಲೆಯೊಂದರ ಬಳಿ ಚಪ್ಪಲಿ ಬಿಟ್ಟು ತಾನು ಕೊಲೆಯಾಗಿದ್ದ ರೀತಿ ಸೀನ್ ಕ್ರಿಯೇಟ್ ಮಾಡಿದ್ದ. ಬಳಿಕ ಗೋವಾಗೆ ತೆರಳಿದ್ದ. ಇತ್ತ ಆತಂಕಗೊಂಡಿದ್ದ ಮನೆಯವರು ಅರಕೆರೆ ಪೊಲೀಸರಿಗೆ ದೂರು ನೀಡಿದ್ದರು.

ರಕ್ತ, ತಲೆ ಕೂದಲು ನಾಲೆ ಬಳಿ ಚಪ್ಪಲಿ ಕಂಡಿದ್ದ ಸ್ಥಳೀಯರು ಮನು ಕೊಲೆಯಾದ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು. ಹೀಗಾಗಿ‌ ಪೊಲೀಸರು ಕೂಡ ಕೆಲವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು. ಮತ್ತೊಂದೆಡೆ ಗೋವಾದಿಂದ ವಾಪಸ್​​ ಆಗಿದ್ದ ಮನು ಬೆಂಗಳೂರಿನ ಪಿಜಿಯೊಂದರಲ್ಲಿ ವಾಸ್ತವ್ಯ ಹೂಡಿದ್ದ.

ನಿರಂತರ ವಿಚಾರಣೆ ಬಳಿಕ ಮನು ಮೊಬೈಲ್ ಲೋಕೇಶನ್ ಪತ್ತೆ ಹಚ್ಚಿದ ಖಾಕಿಗೆ ಆತ ಬೆಂಗಳೂರಿನಲ್ಲಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ತಕ್ಷಣವೇ ಆತನನ್ನು ಕರೆತಂದು ವಿಚಾರಣೆ ನಡೆಸಿದಾಗ ವೇಳೆ ಸಾಲ ಪಡೆದು ಬೆದರಿಕೆ ಹಾಕಿದ್ದವರಿಗೆ ಬುದ್ಧಿ ಕಲಿಸಲು ಕಿಡ್ನಾಪ್ ಮತ್ತು ಮರ್ಡರ್ ಡ್ರಾಮಾ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.