ಮನೆ ರಾಜಕೀಯ ಮಳೆ ಹಾನಿ ಪರಿಶೀಲನೆ: ಕೇಂದ್ರ ತಂಡದ ವಿರುದ್ಧ ಹೆಚ್’ಡಿಕೆ ಅಸಮಾಧಾನ

ಮಳೆ ಹಾನಿ ಪರಿಶೀಲನೆ: ಕೇಂದ್ರ ತಂಡದ ವಿರುದ್ಧ ಹೆಚ್’ಡಿಕೆ ಅಸಮಾಧಾನ

0

ಬೆಂಗಳೂರು(Bengaluru): ಮಳೆ ಹಾನಿ ಪರಿಶೀಲನೆ ನಡೆಸಿ ವರದಿ ನೀಡಲು ಬಂದ ಕೇಂದ್ರ ತಂಡದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದು, ‘ಬಂದ ಪುಟ್ಟ ಹೋದ ಪುಟ್ಟ’ ಎಂಬಂತಾಗಿದೆ.

ನಿಯಮ 69 ರ ಅಡಿಯಲ್ಲಿ ಅತಿವೃಷ್ಟಿ ಚರ್ಚೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕೇಂದ್ರ ಸಮೀಕ್ಷಾ ತಂಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ತಂಡದ ಮುಂದೆ ಜನರು ಹಾವೇರಿಯಲ್ಲಿ ಪರಿಹಾರ ಕೊಡಿಸಿ ಇಲ್ಲಾಂದ್ರೆ ವಿಷ ಸೇವಿಸುವ ಪರಿಸ್ಥಿತಿ ಇದೆ ಎಂದು ಅಳಲು ತೋಡಿಕೊಂಡಿದ್ದಾರೆ‌ ಎಂದರು.

ಶಿಗ್ಗಾವಿ ತಾಲ್ಲೂಕಿನಲ್ಲಿ ಕೇಂದ್ರ ತಂಡದ ಪರಿಶೀಲನೆಗೆ ರೈತರು ಅಸಮಾಧಾನಗೊಂಡಿದ್ದರು. ಈ ಬಗ್ಗೆ ಪತ್ರಿಕೆಯಲ್ಲಿ ವರದಿ ಬಂದಿದೆ. ಬೆಳೆ ನಷ್ಟದ ಬಗ್ಗೆ ಹೊಲಕ್ಕೆ ಬಾರದೆ ರಸ್ತೆಯಲ್ಲೇ ನಿಂತು ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾದರೆ ಎಷ್ಟರ ಮಟ್ಟಿಗೆ ಕೇಂದ್ರ ಸರ್ಕಾರಕ್ಕೆ ವರದಿ ಕೊಡುತ್ತಾರೆ? ಎಂದು ಪ್ರಶ್ನಿಸಿದರು.

ಕಳೆದ ಐದು ವರ್ಷದಲ್ಲಿ ಯಾವ ರೀತಿಯಲ್ಲಿ ಸರಾಸರಿ ಮಳೆ ಹಾಗೂ ಅದರ ಪರಿಣಾಮದ ಬಗ್ಗೆ ವರದಿ ತೆಗೆದುಕೊಳ್ಳಬೇಕಿದೆ. ಸ್ಪರ್ಧೆಯಲ್ಲಿ ಕೃಷಿ ವಿವಿ ಮಾಡಿಕೊಂಡಿದ್ದೇವೆ. ಆದರೆ ಅವರು ಏನು ಮಾಡ್ತಿದ್ದಾರೆ? ಐದು ವರ್ಷಗಳಲ್ಲಿ ಏನು ಕೆಲಸ ಮಾಡಿದ್ದಾರೆ? ಮಳೆ ಅನಾಹುತದ ಬಗ್ಗೆ ವೈಜ್ಞಾನಿಕವಾಗಿ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಮಾತಿಗೆ ಸಹಮತ‌

ಎನ್ ಡಿ ಆರ್ ಎಫ್ ಗೈಡ್ ಲೈನ್ ಬದಲಾವಣೆ ಆಗಿಲ್ಲ. ಐದು ವರ್ಷಕ್ಕೆ ಒಮ್ಮೆ ಪರಿಶೀಲನೆ ಮಾಡಬೇಕಾಗಿದೆ. ಆದರೆ ಕೇಂದ್ರ ಸರ್ಕಾರದಿಂದ ಅದು ಆಗಿಲ್ಲ . ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಸಿದ್ದರಾಮಯ್ಯ ಸದನಲ್ಲಿ ಹೇಳಿದ್ದಾರೆ. ಅದಕ್ಕೆ ನನ್ನ ಸಹಮತ ಇದೆ ಎಂದು ತಿಳಿಸಿದರು.