ಮನೆ ಅಪರಾಧ ಗನ್ ಹಿಡಿದು ದರೋಡೆ ಮಾಡಲು ಯತ್ನ:  ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

ಗನ್ ಹಿಡಿದು ದರೋಡೆ ಮಾಡಲು ಯತ್ನ:  ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

0

ಮಂಡ್ಯ:(Mandya) ಪಾಂಡವಪುರ ತಾಲೂಕಿನ ಬನ್ನಘಟ್ಟದಲ್ಲಿ ಗನ್ ಹಿಡಿದು ದರೋಡೆಗೆ ಯತ್ನಿಸುತ್ತಿದ್ದ ಇಬ್ಬರನ್ನು ಗ್ರಾಮಸ್ಥರೇ ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ.

ಕಾರಿನಲ್ಲಿ ಬಂದಿದ್ದ ನಾಲ್ಕು ಮಂದಿ ಆಗಂತುಕರು ಕೈಯಲ್ಲಿ ಗನ್ ಹಿಡಿದು ಕಾರೊಂದನ್ನು ಅಡ್ಡಗಟ್ಟಿ ದರೋಡೆಗೆ ಯತ್ನಿಸುತ್ತಿದ್ದರು. ಕಾರಿನ ಚಾಲಕ ಕಿರುಚುತ್ತಿದ್ದಂತೆ ಎಚ್ಚೆತ್ತ ಗ್ರಾಮಸ್ಥರು ಆರೋಪಿಗಳ ಗುಂಪಿನ ಮೇಲೆ ದಾಳಿ ಮಾಡಿ ಹಿಡಿದಿದ್ದಾರೆ. ಆದರೆ ಇದರಲ್ಲಿ ಇಬ್ಬರು ಮಾತ್ರ ಗ್ರಾಮಸ್ಥರ ಕೈ ಸಿಕ್ಕಿಬಿದ್ದಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ.

ಸಿಕ್ಕಿಬಿದ್ದಿರುವ ಆರೋಪಿಗಳನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಪಾಂಡವಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗನ್​ ಮತ್ತು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಪರಾರಿಯಾಗಿರುವ ದರೋಡೆಕೋರರ ಪತ್ತೆಗೆ ಬಲೆ ಬೀಸಿದ್ದಾರೆ.

ಈ ಘಟನೆ ಕುರಿತು ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.