ಮನೆ ರಾಜ್ಯ ಇ.ಡಿ ಸಮನ್ಸ್: ಡಿ.ಕೆ.ಶಿವಕುಮಾರ್ ಬೇಸರ

ಇ.ಡಿ ಸಮನ್ಸ್: ಡಿ.ಕೆ.ಶಿವಕುಮಾರ್ ಬೇಸರ

0

ಬೆಂಗಳೂರು(Bengaluru): ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂದಿಸಿದಂತೆ  ವಿಚಾರಣೆಗೆ ಹಾಜರಾಗಲು ಸೂಚಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ಜಾರಿ ಮಾಡಿದೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಡಿ.ಕೆ.ಶಿವಕುಮಾರ್‌, ಭಾರತ್‌ ಜೋಡೊ ಯಾತ್ರೆ ಹಾಗೂ ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇ.ಡಿ ನನಗೆ ಸಮನ್ಸ್‌ ನೀಡಿದೆ. ನಾನು ಸಹಕರಿಸಲು ಸಿದ್ಧ. ಆದರೆ, ಈ ಸಮನ್ಸ್‌ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ನನಗೆ ತೊಂದರೆಯಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ದೆಹಲಿಯ ಸಫ್ದರ್‌ಜಂಗ್‌ ಎನ್‌ಕ್ಲೇವ್‌ನಲ್ಲಿರುವ ಶಿವಕುಮಾರ್ ಒಡೆತನದ ನಿವಾಸದಲ್ಲಿ  8.59 ಕೋಟಿ ನಗದು ದೊರೆತಿದ್ದರಿಂದ, ಐಪಿಸಿಯ ಸೆಕ್ಷನ್‌ 120 ‘ಬಿ’ ಅಡಿ ಪ್ರಕರಣ ದಾಖಲಿಸಲಾಗಿದೆ.

ಕನ್ಯಾಕುಮಾರಿಯಲ್ಲಿ ಆರಂಭಗೊಂಡು ಕಾಶ್ಮೀರದ ಶ್ರೀನಗರದಲ್ಲಿ ಕೊನೆಗೊಳ್ಳುವ ಭಾರತ್‌ ಜೋಡೊ ಯಾತ್ರೆಯು 150 ದಿನಗಳ ಕಾಲ 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಂಚರಿಸಲಿದೆ. ಸೆ.07 ರಂದು ಈ ಯಾತ್ರೆ ಆರಂಭಗೊಂಡಿದೆ. ಇತ್ತ ಕರ್ನಾಟಕದಲ್ಲಿ ವಿಧಾನಸಭೆ ಕಲಾಪ ನಡೆಯುತ್ತಿದೆ.