ಮನೆ ರಾಜಕೀಯ ಮಿಮ್ಸ್’ನಲ್ಲಿ ರೋಗಿಗಳ ಸಾವು: ಕರ್ತವ್ಯ ಲೋಪ ಎಸಗಿದವರ ವಿರುದ್ಧ ಕ್ರಮ- ಡಾ. ಕೆ. ಸುಧಾಕರ್

ಮಿಮ್ಸ್’ನಲ್ಲಿ ರೋಗಿಗಳ ಸಾವು: ಕರ್ತವ್ಯ ಲೋಪ ಎಸಗಿದವರ ವಿರುದ್ಧ ಕ್ರಮ- ಡಾ. ಕೆ. ಸುಧಾಕರ್

0

ಬೆಂಗಳೂರು(Bengaluru): ಬಳ್ಳಾರಿಯ ವಿಮ್ಸ್ ನಲ್ಲಿ ನಡೆದಿರುವ ಘಟನೆ ಅತ್ಯಂತ ದುರಾದೃಷ್ಠಕರ. ಕರ್ತವ್ಯ ಲೋಪ ಎಸಗಿದವರ ವಿರುದ್ದ ಕ್ರಮ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ಬಳ್ಳಾರಿಯ ವಿಮ್ಸ್ ನಲ್ಲಿ ವಿದ್ಯುತ್ ಸಂಪರ್ಕ ಕಡಿತದಿಂದ ಮೂವರು ರೋಗಿಗಳು ಮೃತಪಟ್ಟಿದ್ದಾರೆಂಬ ವಿಪಕ್ಷಗಳ ಆರೋಪಕ್ಕೆ ಸಂಬಂಧಿಸಿದಂತೆ ಟ್ವಿಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಬುಧವಾರ ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರವಾಗಿದ್ದು, ಘಟನೆಯ ಬಗ್ಗೆ ಸೂಕ್ತ ಇಲಾಖಾ ತನಿಖೆ ನಡೆಸಿ ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪದೋಷಗಳ ಬಗ್ಗೆ ವರದಿ ನೀಡಲು ಬಿಎಂಸಿಆರ್ ಐ ಸಂಸ್ಥೆಯ ಡಾ.ಸ್ಮಿತಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗಿದೆ.

ಸಮಿತಿಯ ತನಿಖಾ ವರದಿ ಕೈಸೇರಿದ ಕೂಡಲೇ ಕರ್ತವ್ಯ ಲೋಪ ಎಸಗಿ ಅಮಾಯಕ ರೋಗಿಗಳ ದುರಂತ ಸಾವಿಗೆ ಕಾರಣರಾದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.