ತ್ವರಿತ ನ್ಯಾಯಾಲಯಗಳು ಮತ್ತು ತ್ವರಿತ ವಿಶೇಷ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳು ಮತ್ತು ಅಂತಹ ನ್ಯಾಯಾಲಯಗಳ ಸ್ಥಾಪನೆಗೆ ಮೀಸಲಿಟ್ಟ ಹಣ ಬಳಕೆಯಾಗದಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು ಅವರು ದೇಶದ ಎಲ್ಲಾ ಹೈಕೋರ್ಟ್ಗಳ ಮುಖ್ಯ ನ್ಯಾಯಮೂರ್ತಿಗಳಿಗೆ (ಸಿಜೆ) ಪತ್ರ ಬರೆದಿದ್ದಾರೆ.
ಮಹಿಳೆಯರು, ಮಕ್ಕಳು ಮತ್ತು ತುಳಿತಕ್ಕೊಳಗಾದ ಸಮುದಾಯಗಳಿಗೆ ಸೇರಿದ ನಾಗರಿಕರ ಸುರಕ್ಷತೆಯ ಮೇಲೆ ಇದು ಪರಿಣಾಮ ಬೀರುವುದರಿಂದ ಅಂತಹ ನ್ಯಾಯಾಲಯಗಳ ದೃಢವಾದ ಕಾರ್ಯನಿರ್ವಹಣೆಯ ಅಗತ್ಯವನ್ನು ಪತ್ರವು ಎತ್ತಿ ತೋರಿಸಿದೆ.
ಈ ನಿಟ್ಟಿನಲ್ಲಿ, ಕಾನೂನು ಸಚಿವರು ಮುಖ್ಯ ನ್ಯಾಯಮೂರ್ತಿಗಳಿಗೆ ಈ ಕೆಳಗಿನ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸುವಂತೆ ವಿನಂತಿಸಿದ್ದಾರೆ:
• ಪ್ರಕರಣಗಳು ದೊಡ್ಡಮಟ್ಟದಲ್ಲಿ ಬಾಕಿ ಇರುವ ದೃಷ್ಟಿಯಿಂದ 14ನೇ ಹಣಕಾಸು ಆಯೋಗದ ನಿಧಿ ಹಂಚಿಕೆ ಮೂಲಕ ಮತ್ತು ಅದರಂತೆ ಆಲೋಚಿಸಿರುವ ಪ್ರಕಾರ ನಿಮ್ಮ ನ್ಯಾಯವ್ಯಾಪ್ತಿಯಲ್ಲಿ ಸ್ಥಾಪಿಸಬೇಕಿರುವ ತ್ವರಿತ ಗತಿ ನ್ಯಾಯಾಲಯಗಳನ್ನು ರಾಜ್ಯ ಸರ್ಕಾರದೊಂದಿಗೆ ಸೂಕ್ತ ಸಮಾಲೋಚನೆ ನಡೆಸಿ ಸ್ಥಾಪಿಸಬಹುದು.
• ತ್ವರಿತ ವಿಶೇಷ ನ್ಯಾಯಾಲಯಗಳ ಕೇಂದ್ರ ಪ್ರಾಯೋಜಿತ ಯೋಜನೆಯ ಪ್ರಕಾರ ನಿಮ್ಮ ನ್ಯಾಯವ್ಯಾಪ್ತಿಯಲ್ಲಿ ಉಳಿದ ಸಂಖ್ಯೆಯ ನ್ಯಾಯಾಲಯಗಳನ್ನು ಆದ್ಯತೆಯ ಆಧಾರದ ಮೇಲೆ ಸ್ಥಾಪಿಸಬಹುದು ಮತ್ತು ಕಾರ್ಯಗತಗೊಳಿಸಬಹುದು.
• ಪ್ರಕರಣಗಳ ತ್ವರಿತ ವಿಲೇವಾರಿ ಖಚಿತಪಡಿಸಿಕೊಳ್ಳಲು ಮತ್ತು ಅವು ಬಾಕಿ ಉಳಿಯುವುದನ್ನು ತಪ್ಪಿಸಲು, ಸಂಬಂಧಪಟ್ಟ ನ್ಯಾಯಾಲಯಗಳಿಗೆ ಅಗತ್ಯ ಸೂಚನೆ ಮತ್ತು ಬೆಂಬಲವನ್ನು ನೀಡಬಹುದು ಮತ್ತು ತ್ವರಿತ ನ್ಯಾಯಾಲಯಗಳು/ ತ್ವರಿತ ವಿಶೇಷ ನ್ಯಾಯಾಲಯ ಪ್ರಕರಣಗಳ ಕಾಲಮಿತಿ ವಿಲೇವಾರಿಗೆ ಕಟ್ಟುನಿಟ್ಟಾದ ಮೇಲ್ವಿಚಾರಣಾ ಕಾರ್ಯವಿಧಾನ ಅಳವಡಿಸಿಕೊಳ್ಳಬಹುದು.
• ಸಾರ್ವಜನಿಕ ಹಣಕಾಸು ನಿರ್ವಹಣಾ ವ್ಯವಸ್ಥೆಯ ಅಡಿಯಲ್ಲಿ ತಿಳಿಸಿರುವಂತೆ ತ್ವರಿತ ವಿಶೇಷ ನ್ಯಾಯಾಲಯಗಳ ಸ್ಥಾಪನೆಗಾಗಿ ನಿಗದಿಪಡಿಸಿದ ಭಾರತ ಸರ್ಕಾರದ ನಿಧಿಯನ್ನು ಸಮಯೋಚಿತವಾಗಿ ಪಡೆದುಕೊಳ್ಳಲು ಅಗತ್ಯ ಪಾಲನೆಗಳನ್ನು ದಯವಿಟ್ಟು ಮಾಡತಕ್ಕದ್ದು.
ಘೋರ ಅಪರಾಧಗಳು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರ ಮೇಲಿನ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗಾಗಿ ರಾಜ್ಯ ಸರ್ಕಾರಗಳು ಸ್ಥಾಪಿಸಿರುವ ತ್ವರಿತ ನ್ಯಾಯಾಲಯಗಳ ಕಾರ್ಯನಿರ್ವಹಣೆಯ ಸ್ಥಿತಿಯನ್ನು ಪರಿಶೀಲಿಸಿ ಈ ಪತ್ರ ಬರೆಯಲಾಗಿದೆ. ಅತ್ಯಾಚಾರ ಮತ್ತು ಪೋಕ್ಸೋ ಕಾಯಿದೆಯಡಿ ದಾಖಲಾಗುವ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಕೇಂದ್ರ ಪ್ರಾಯೋಜಿತ ಯೋಜನೆ (CSS) ಅಡಿಯಲ್ಲಿ ತ್ವರಿತ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ.
14ನೇ ಹಣಕಾಸು ಆಯೋಗವು ಹೆಚ್ಚಿನ ನಿಧಿ ಹಂಚಿಕೆ ಮಾಡಿ ರಾಜ್ಯ ಸರ್ಕಾರಗಳು 1,800 ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಶಿಫಾರಸು ಮಾಡಿದೆ. ಆದರೂ ದೇಶಾದ್ಯಂತ 896 ತ್ವರಿತ ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿದ್ದು13,18,427 ಪ್ರಕರಣಗಳು ಬಾಕಿ ಉಳಿದಿವೆ. ಪ್ರತಿ ತಿಂಗಳು ಸುಮಾರು 88,000 ಹೊಸ ಪ್ರಕರಣಗಳು ದಾಖಲಾಗುತ್ತಿದ್ದರೆ, ಸುಮಾರು 35,000 ಪ್ರಕರಣಗಳು ಮಾತ್ರ ವಿಲೇವಾರಿಯಾಗುತ್ತಿವೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.