ಮೈಸೂರು(Mysuru): ಆರ್ಥಿಕವಾಗಿ ಸಬಲರಾದವರಿಗೆ ಮೀಸಲಾತಿ ನಿಲ್ಲಿಸಬೇಕು. ದಲಿತರು, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲ ಜಾತಿಗಳಲ್ಲೂ ಮೀಸಲಾತಿ ಪಡೆದು ಆರ್ಥಿಕವಾಗಿ ಸಬಲರಾದವರು ಮತ್ತೆ ಮೀಸಲಾತಿ ಬಳಸಿಕೊಳ್ಳಬಾರದು. ಅದು ಕಡು ಬಡವರಿಗೆ ಸಿಗುವಂತೆ ಮಾಡಬೇಕು ಬಿಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಸ್ವಾಭಿಮಾನದ ಬದುಕು ದೊರೆಯುವವರೆಗೂ ಮೀಸಲಾತಿ ಮುಂದುವರಿಸಬೇಕು ನಿಜ. ಆದರೆ, ಎಲ್ಲ ರಾಜಕೀಯ ಪಕ್ಷಗಳ ದಲಿತ ನಾಯಕರು ಕೂಡ ಮೀಸಲಾತಿಯನ್ನು ಸಂಪೂರ್ಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ದೂರಿದರು.
ನಾನು ಸಾಮಾನ್ಯ ಕ್ಷೇತ್ರದಿಂದ ಆಯ್ಕೆಯಾಗಿ ಬರುತ್ತಿದ್ದೇನೆ. ಮೀಸಲಾತಿಯನ್ನು ಬಳಸಿಕೊಳ್ಳುತ್ತಿಲ್ಲ ಎಂದು ಪ್ರತಿಕ್ರಿಯಿಸಿದರು.
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಎಷ್ಟು ವರ್ಷದಿಂದ ರಾಜಕೀಯದಲ್ಲಿ ಇದ್ದಾರೆ. ಅವರಿಗೆ, ಅವರ ಮಗನಿಗೆ ಮೀಸಲಾತಿ ಏಕೆ ಬೇಕು? ಮಂತ್ರಿಯಾಗಿ ಆರ್ಥಿಕವಾಗಿ ಮೇಲೆ ಬಂದ ಮೇಲೂ ಅಂಥವರಿಗೆ ಕೊಡಬೇಕೇಕೆ?. ಒಂದೇ ಕುಟುಂಬದವರು ಅನುಭವಿಸುವುದು ಸರಿಯಲ್ಲ ಎಂದು ಕೇಳಿದರು.
ಡಿಕೆಶಿ ನಿರಪರಾಧಿಯಾಗಿ ಹೊರಬಂದರೆ ಸಂತೋಷ:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಾಮೀನಿನ ಮೇಲಿದ್ದಾರೆ. ಅವರು ನಿರಾಪರಾಧಿಯಾಗಿ ಹೊರಬಂದರೆ ಸಂತೋಷ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ಸಮನ್ಸ್ ಜಾರಿ ಮಾಡಿರುವುದು ರಾಜಕೀಯ ಪ್ರೇರಿತವಲ್ಲ. ಅವರ ಮೇಲೆ ಇಡಿ ದಾಳಿ ಮಾಡಿದ್ದಾಗ ಬಂಡಲ್ಗಟ್ಟಲೆ ಹಣ ಸಿಕ್ಕಿತ್ತು. ಡಿಕೆಶಿ ಹೇಳಿಕೆಯು, ಕಳ್ಳನು ನಾನು ಯಾವುದೋ ಸಂದರ್ಭದಲ್ಲಿದ್ದೇನೆ, ಬಂಧಿಸಬೇಡಿ, ನೋಟಿಸ್ ಕೊಡಬೇಡಿ ಎಂದು ಹೇಳಿದಂತಿದೆ ಎಂದು ಟೀಕಿಸಿದರು.
ಗುತ್ತಿಗೆದಾರರೊಬ್ಬರು ನನ್ನ ವಿರುದ್ಧ ಮಾಡಿದ್ದ ಆರೋಪದಲ್ಲಿ ಎಫ್ಐಆರ್ ಆಗುತ್ತಿದ್ದಂತೆಯೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೆ. ಕ್ಲೀನ್ಚಿಟ್ ಸಿಕ್ಕಾಗ ನನ್ನನ್ನು ಮಂತ್ರಿ ಮಾಡುತ್ತಾರೆ ಎಂದುಕೊಂಡಿದ್ದೆ. ಆದರೆ, ಮಾಡದಿರುವುದಕ್ಕೆ ಬೇಸರವಿದೆ. ಎಲ್ಲವನ್ನೂ ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದೇನೆ ಎಂದು ಪ್ರತಿಕ್ರಿಯಿಸಿದರು.
ವಿಧಾನಮಂಡಲ ಅಧಿವೇಶನಕ್ಕೆ, ಕಾಲು ನೋವಿನ ಕಾರಣದಿಂದಾಗಿ ಹೋಗಿಲ್ಲ. ಸಚಿವ ಸ್ಥಾನ ಸಿಗಲಿಲ್ಲವೆಂಬ ಬೇಸರದಿಂದಾಗಿ ಹೋಗಿಲ್ಲ ಎಂಬುದು ಸುಳ್ಳು. ಸಚಿವನಾಗದಿದ್ದರೂ ಪಕ್ಷಕ್ಕೆ ದುಡಿಯುತ್ತೇನೆ ಎಂದರು.
ಹಿಂದೂಸ್ತಾನ–ಪಾಕಿಸ್ತಾನ ಒಂದಾಗಬೇಕು. ರಾಷ್ಟ್ರ ಭಕ್ತ ಮುಸ್ಲಿಮರ ಬಗ್ಗೆ ನಮಗೆ ಯಾವ ಅಸಮಾಧಾನವೂ ಇಲ್ಲ. ನಮ್ಮ ವಿರುದ್ಧದೇ ಸಂಚು ಮಾಡುವ, ಪಾಕಿಸ್ತಾನಕ್ಕೆ ಜಿಂದಾಬಾದ್ ಎನ್ನುವ ರಾಷ್ಟ್ರ ದ್ರೋಹಿ ಮುಸ್ಲಿಮರನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.