ಮನೆ ಸುದ್ದಿ ಜಾಲ ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ ಕಾರ್ಯಕ್ರಮಕ್ಕೆ ಎಸ್.ಟಿ.ಸೋಮಶೇಖರ್ ಚಾಲನೆ

ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ ಕಾರ್ಯಕ್ರಮಕ್ಕೆ ಎಸ್.ಟಿ.ಸೋಮಶೇಖರ್ ಚಾಲನೆ

0

ಮೈಸೂರು(Mysuru): ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸ್ವಚ್ಛ ಭಾರತ್ ಅಂಗವಾಗಿ ಹಮ್ಮಿಕೊಂಡಿದ್ದ “ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ” ಕಾರ್ಯಕ್ರಮಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಚಾಲನೆ ನೀಡಿದರು.

ಮೈಸೂರು ನಗರದಲ್ಲಿ ಸ್ವಚ್ಚತೆ ಕಾಪಾಡಲು ಹಮ್ಮಿಕೊಂಡಿರುವ ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು. ಪ್ರವಾಸಿ ತಾಣಗಳನ್ನು ಕಸ ಮುಕ್ತಗೊಳಿಸಬೇಕು. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಈ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಚಿವರು ಕರೆ ಕೊಟ್ಟರು.

ಕಾರ್ಯಕ್ರಮದಲ್ಲಿ ಶಾಸಕರಾದ ನಾಗೇಂದ್ರ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ, ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.