ಕಲಬುರಗಿ(Kalaburagi): ಜವಳಿ ಪಾರ್ಕ್ಗೆ ಶೀಘ್ರ ಅಡಿಗಲ್ಲು ಹಾಕಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕಲಬುರಗಿ, ವಿಜಯಪುರದಲ್ಲಿ ಜವಳಿ ಪಾರ್ಕ್ ಆರಂಭಿಸಲಾದ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಿದ್ದೇವೆ. ಎರಡೂ ಕಡೆ ಪಾರ್ಕ್ ಆರಂಭಕ್ಕೆ ಮಂಜೂರಾತಿ ನೀಡಲಿದ್ದು, ಶೀಘ್ರ ಕಲಬುರಗಿಗೆ ಮತ್ತೆ ಬಂದು ಅಡಿಗಲ್ಲು ಹಾಕಲಿದ್ದೇನೆ ಎಂದರು.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಮುಂಬರುವ ವರ್ಷವೂ ₹ 3 ಸಾವಿರ ಕೋಟಿ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
ಬೀದರ್-ಶ್ರೀರಂಗಪಟ್ಟಣ ಹೆದ್ದಾರಿಯು ಬಳ್ಳಾರಿಯಿಂದ ಕಲಬುರಗಿವರೆಗೆ ಅಭಿವೃದ್ಧಿ ಆಗಿಲ್ಲ. ಇದನ್ನು ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ಕೈಗೆತ್ತಿಕೊಂಡು ನಾಲ್ಕು ಪಥದ ರಸ್ತೆಯನ್ನು ನಿರ್ಮಿಸಲಾಗುವುದು ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ 2100 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಹೊಸದಾಗಿ 68 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಂಜೂರಾತಿ ನೀಡಲಾಗಿದೆ. 14 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತಲಾ ₹ 8 ಕೋಟಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದರು.
ಎರಡು ಹೊಸ ಯೋಜನೆ ಘೋಷಣೆ:
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಪ್ರತಿ ಗ್ರಾಮದ ಒಂದೊಂದು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ ₹ 10 ಲಕ್ಷ ನೆರವು ನೀಡಲಾಗುವುದು. ಯುವ ಶಕ್ತಿ ಯೋಜನೆಯಡಿ ಪ್ರತಿ ಗ್ರಾಮದಲ್ಲಿ ಎರಡು ಯುವ ಶಕ್ತಿ ಸಂಘಗಳಿಗೆ ₹ 1 ಲಕ್ಷ ನೆರವು ನೀಡಲಾಗುವುದು. ಜೊತೆಗೆ ಇವರು ತಯಾರಿಸಿದ ವಸ್ತುಗಳಿಗೆ ಮಾರುಕಟ್ಟೆ ಒದಗಿಸಲು ಒಪ್ಪಂದ ಮಾಡಿಕೊಳ್ಳಲಾಗುವುದು ಎಂದರು.
ಕಲಬುರಗಿಯಲ್ಲಿ ಜವಳಿ ಪಾರ್ಕ್, ಬೀದರ್ ನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಸಂಶೋಧನೆಗೆ ಸಿಪೆಟ್, ರಾಯಚೂರು, ಕೊಪ್ಪಳದಲ್ಲಿ ವಿಮಾನ ನಿಲ್ದಾಣ ನಿರ್ಮಾಣ, ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಹಾಗೂ ಯಾದಗಿರಿಯಲ್ಲಿ ಫಾರ್ನಾಸ್ಯುಟಿಕಲ್ ಕೈಗಾರಿಕೆ ಆರಂಭಿಸಲಾಗುವುದು ಎಂದರು.
ರಾಜ್ಯಸಭಾ ಮಾಜಿ ಸದಸ್ಯ ಬಸವರಾಜ ಪಾಟೀಲ ಸೇಡಂ ಅವರು ಅಧ್ಯಕ್ಷರಾಗಿರುವ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ₹ 300 ಕೋಟಿ ಅನುದಾನ ಮಂಜೂರು ಮಾಡಲಾಗುವುದು ಎಂದು ಘೋಷಿಸಿದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.