ಮೈಸೂರು(Mysuru): ದಸರಾ ಜಂಬೂ ಸವಾರಿಯ ಪುಷ್ಪಾರ್ಚನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವುದಿಲ್ಲ, ಬದಲಾಗಿ ಕೇಂದ್ರದ 4 ಜನ ಮಂತ್ರಿಗಳು ದಸರಾ ಉದ್ಘಾಟನೆಗೆ ಆಗಮಿಸುವ ನಿರೀಕ್ಷೆಯಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಸೆ.26 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದು, ಅವರ ಕಾರ್ಯಕ್ರಮದ ಪಟ್ಟಿ ಅಂತಿಮವಾಗುತ್ತಿದೆ. ಅವರು ಮೈಸೂರು ಅರಮನೆಗೆ ಭೇಟಿ ನೀಡುವ ಬಗ್ಗೆ ಮಾಹಿತಿ ಕೇಳಲಾಗಿದೆ. ಆದರೆ, ರಾಷ್ಟ್ರಪತಿ ಭವನದಿಂದ ಅರಮನೆ ಭೇಟಿ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ, ಬಂದಮೇಲೆ ಕಾರ್ಯಕ್ರಮ ಪಟ್ಟಿ ಅಂತಿಮವಾಗುತ್ತದೆ ಎಂದರು.
ರಾಷ್ಟ್ರಪತಿ ಅವರ ಕಾರ್ಯಕ್ರಮ ಪಟ್ಟಿಯ ಆಧಾರದ ಮೇಲೆ ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಯಾರಿರಬೇಕು ಎಂಬುದು ಅಂತಿಮವಾಗಲಿದೆ ಎಂದರು.
ಈ ಬಾರಿ ದಸರಾ ಪಾಸ್ ಹಾಗೂ ಗೋಲ್ಡ್ ಪಾಸ್ ಬಗ್ಗೆ ಇಂದು ಸಭೆ ನಡೆಯಲಿದ್ದು, ಸಂಜೆ ವೇಳೆಗೆ ಅಂತಿಮವಾಗಲಿದೆ. ಇದರ ಜೊತೆಗೆ ಯುವ ದಸರಾದಲ್ಲಿ ಯಾವೆಲ್ಲ ಕಾರ್ಯಕ್ರಮಗಳು ಇರಲಿವೆ ಎಂಬುದು ಸಹ ಇಂದೇ ಅಂತಿಮವಾಗಲಿದೆ. ದಸರಾಗೆ ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ ಮಾಡುವುದಾಗಿ ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು.
ಈ ಬಾರಿ ಮೈಸೂರು ನಗರದಲ್ಲಿ ಆಕರ್ಷಕವಾಗಿ ದೀಪಾಲಂಕಾರ ಮಾಡಲು 4.5 ಕೋಟಿ ಹಣ ನಿಗದಿ ಮಾಡಲಾಗಿದೆ. ಎಲ್ಲ ಕೆಲಸವೂ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.