ಕೇಂದ್ರ ರೈಲ್ವೇ ಇಲಾಖೆಯಲ್ಲಿ ಶಿಕ್ಷಕರ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಭುಸಾವಲ್ ವಿಭಾಗದಲ್ಲಿ ರೈಲ್ವೇ ಶಾಲೆ (ಆಂಗ್ಲ ಮಾಧ್ಯಮ)ದಲ್ಲಿ ವಿವಿಧ ವಿಷಯಗಳ ಪಾಠ ಮಾಡಲು ಶಿಕ್ಷಕರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 22 ಹುದ್ದೆಗಳ ಭರ್ತಿಗೆ ಮುಂದಾಗಲಾಗಿದ್ದು, ಇದಕ್ಕಾಗಿ ನೇರ ಸಂದರ್ಶನ ನಡೆಸಲು ತೀರ್ಮಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 4 ರಂದು ನಡೆಯುವ ವಾಕ್- ಇನ್- ಇಂಟರ್ವ್ಯೂನಲ್ಲಿ ಭಾಗಿಯಾಗಬಹುದಾಗಿದೆ.
ಈ ಹುದ್ದೆಗಳು ಸಂಪೂರ್ಣವಾಗಿ ತಾತ್ಕಾಲಿಕವಾಗಿದೆ. 2022-23ನೇ ಪ್ರಸಕ್ತ ಸಾಲಿಗೆ ಈ ಹುದ್ದೆ ಆಯ್ಕೆ ನಡೆಯಲಿದೆ. ಈ ನೇಮಕಾತಿ ಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆ: ಕೇಂದ್ರ ರೈಲ್ವೇ ಇಲಾಖೆ
ಹುದ್ದೆಯ ಹೆಸರು: ಶಿಕ್ಷಕರು
ಒಟ್ಟು ಹುದ್ದೆ ಸಂಖ್ಯೆ: 22
ಕಾರ್ಯ ನಿರ್ವಹಣೆ ಸ್ಥಳ: ಭುಸಾವಲ್- ಮಹಾರಾಷ್ಟ್ರ
ವೇತನ: 21,250- 27,500 ರೂ ಮಾಸಿಕ
ಶೈಕ್ಷಣಿಕ ಅರ್ಹತೆ: ನೇಮಕಾತಿ ನಿಯಮ ಅನುಸಾರ ಅಭ್ಯರ್ಥಿಯು ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಜೊತೆಗೆ ಬಿಎಡ್ ಪದವಿ ಪಡೆದಿರಬೇಕು.
ವಯೋಮಿತಿ: ನೇಮಕಾತಿ ನಿಯಮ ಅನುಸಾರ ಅಭ್ಯರ್ಥಿಯು ಕನಿಷ್ಟ 18 ಮತ್ತು ಗರಿಷ್ಟ 65 ವರ್ಷಗಳನ್ನು ಮೀರಿರಬಾರದು.
ಅರ್ಜಿ ಶುಲ್ಕ: ವಿನಾಯಿತಿ
ನೇರ ಸಂದರ್ಶನ ನಡೆಯುವ ಸ್ಥಳ
ಡಿಆರ್ಎಂ ಕಚೇರಿ, ಭುಸಾವಲ್
ಪ್ರಮುಖ ದಿನಾಂಕಗಳು
ಅಧಿಕೃತ ಅಧಿಸೂಚನೆ ಬಿಡುಗಡೆ ದಿನಾಂಕ: 6 ಸೆಪ್ಟೆಂಬರ್ 2022
ನೇರ ಸಂದರ್ಶನ ನಡೆಯುವ ದಿನಾಂಕ: 4 ಅಕ್ಟೋಬರ್ 2022
ನೇರ ಸಂದರ್ಶನದ ಸಮಯ: ಬೆಳಗ್ಗೆ 10ರಿಂದ ಸಂಜೆ 5ರವರೆಗೆ
ಅಧಿಕೃತ ವೆಬ್ಸೈಟ್: indianrailways.gov.in
ನೇರ ಸಂದರ್ಶನಕ್ಕೆ ಈ ದಾಖಲಾತಿ ಅವಶ್ಯ
ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.
ಬಳಿಕ ಅಧಿಸೂಚನೆ ವೇಳೆ ನೀಡಲಾಗಿರುವ ನಿಗದಿತ ಅರ್ಜಿಗಳನ್ನು ಭರ್ತಿ ಮಾಡಬೇಕು
ಅಭ್ಯರ್ಥಿಗಳು ಒಂದು ಸೆಟ್ ಸ್ವಯಂ-ದೃಢೀಕರಿಸಿದ ಪ್ರತಿಗಳು, ಒಂದು ಪಾಸ್ಪೋರ್ಟ್ ಫೋಟೋ ಜೋತೆ ಪ್ರಶಂಸಾಪತ್ರಗಳನ್ನು ನೇರ ಸಂದರ್ಶನ ವೇಳೆ ಹಾಜರು ಪಡಿಸಬೇಕು.
ವಯಸ್ಸಿನ ದೃಢೀಕರಣ ಅಥವಾ ವಯಸ್ಸು ದಾಖಲಾಗಿರುವ ಎಸ್ಎಸ್ಎಲ್ಸಿ ಪ್ರಮಾಣ ಪ್ರತ್ರ, ಶೈಕ್ಷಣಿಕ ದಾಖಲೆ, ಅನುಭವ, ಸಂಶೋಧಾನ ಪತ್ರಗಳು
ನೇರ ಸಂದರ್ಶನದ ನಿಗದಿತ ದಿನದಂದು ಬೆಳಗ್ಗೆ 9.30ಕ್ಕೆ ಹಾಜರಾಗಬೇಕು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.