ನವದೆಹಲಿ(Newdelhi): ಗರಿಷ್ಠ ಮರಣ ದಂಡನೆ ವಿಧಿಸಬಹುದಾದ ಪ್ರಕರಣಗಳಲ್ಲಿ, ಯಾವ ಸಂದರ್ಭಗಳಲ್ಲಿ ಆ ಶಿಕ್ಷೆಯ ಪ್ರಮಾಣವನ್ನು ತಗ್ಗಿಸಬಹುದು ಎಂಬ ಬಗ್ಗೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲು ಸುಮೋಟೊ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್, ಇದರ ವಿಚಾರಣೆಯನ್ನು ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠಕ್ಕೆ ವರ್ಗಾಯಿಸಿದೆ.
ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ನೇತೃತ್ವದ ಪೀಠ, ಗರಿಷ್ಠ ಮರಣದಂಡನೆಯನ್ನು ಎದುರಿಸುತ್ತಿರುವ ಪ್ರಕರಣದಲ್ಲಿ ಆರೋಪಿಗೆ ಯಾವ ಸಂದರ್ಭಗಳಲ್ಲಿ ಶಿಕ್ಷೆಯ ಪ್ರಮಾಣವನ್ನು ತಗ್ಗಿಸಬಹುದು ಎಂಬ ವಿಷಯದಲ್ಲಿ ಸ್ಪಷ್ಟತೆ ಮತ್ತು ಏಕರೂಪದ ವಿಧಾನವನ್ನು ಹೊಂದಲು ವಿಸ್ತೃತ ಪೀಠದಿಂದ ವಿಚಾರಣೆಯ ಅಗತ್ಯವಿದೆ ಎಂದು ಹೇಳಿತು.ಈ ಸಂಬಂಧ ಆದೇಶಕ್ಕಾಗಿ ಸಿಜೆಐ ಮುಂದೆ ವಿಷಯವನ್ನು ಇರಿಸಲಿ ಎಂದು ನ್ಯಾಯಮೂರ್ತಿ ಎಸ್. ರವೀಂದ್ರ ಭಟ್ ತೀರ್ಪು ಪ್ರಕಟಿಸುವಾಗ ಹೇಳಿದರು.
ಒಮ್ಮೆ ಮರಣದಂಡನೆ ಶಿಕ್ಷೆ ಜಾರಿಯಾದ ನಂತರ ಅದನ್ನೂ ಮತ್ತೆ ಯಾವತ್ತೂ ಬದಲಾಯಿಸಲಾಗುವುದಿಲ್ಲ ಮತ್ತು ಮರಣದಂಡನೆ ಶಿಕ್ಷೆ ವಿಧಿಸುವ ಅಗತ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡುವಂತೆ ಆರೋಪಿಗೆ ಎಲ್ಲ ಅವಕಾಶಗಳನ್ನು ನೀಡಬೇಕು ಎಂದು ಪೀಠವು ಆಗಸ್ಟ್ 17 ರಂದು ತನ್ನ ತೀರ್ಪನ್ನು ಕಾಯ್ದಿರಿಸಿದಾಗ ಉಲ್ಲೇಖಿಸಿತ್ತು.ಮರಣದಂಡನೆ ಶಿಕ್ಷೆಯನ್ನು ವಿಧಿಸುವಾಗ ಪರಿಗಣಿಸಬೇಕಾದ ಸಂಭಾವ್ಯ ಶಿಕ್ಷೆ ತಗ್ಗಿಸುವ ಸನ್ನಿವೇಶಗಳಿಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ರೂಪಿಸುವುದು ಎಂದು ಈ ಪ್ರಕರಣಕ್ಕೆ ಹೆಸರಿಸಲಾಗಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.