ಮೊಹಾಲಿ(Mohali): ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಎದುರಾದ ನಿರಾಸೆಯನ್ನು ಮರೆತು ಟಿ20 ವಿಶ್ವಕಪ್ಗೆ ಸಜ್ಜಾಗುತ್ತಿರುವ ಭಾರತ ತಂಡಕ್ಕೆ ಮತ್ತೊಂದು ಸವಾಲು ಎದುರಾಗಿದೆ.
ಆಸ್ಟ್ರೇಲಿಯಾ ಎದುರಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಇಲ್ಲಿನ ಮೊಹಾಲಿ ಕ್ರೀಡಾಂಗಣದಲ್ಲಿ ಮಂಗಳವಾರ ನಡೆಯಲಿದ್ದು, ರೋಹಿತ್ ಶರ್ಮ ಬಳಗ ಶುಭಾರಂಭದ ನಿರೀಕ್ಷೆಯಲ್ಲಿದೆ.
ಆಸ್ಟ್ರೇಲಿಯಾ ವಿರುದ್ದದ ಸರಣಿಯ ಬೆನ್ನಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧವೂ ಭಾರತ ಆಡಲಿದೆ. ಈ ಎರಡೂ ಸರಣಿಗಳು, ವಿಶ್ವಕಪ್ ಟೂರ್ನಿಗೆ ಸಜ್ಜಾಗಲು ಭಾರತದ ಆಟಗಾರರಿಗೆ ಉತ್ತಮ ಅವಕಾಶ ಕಲ್ಪಿಸಿದೆ.
ಇಂದು ಟೀಂ ಇಂಡಿಯಾ ಆಟಗಾರರ ಅಭ್ಯಾಸದ ಫೋಟೋಗಳನ್ನು ಬಿಸಿಸಿಐ ಹಂಚಿಕೊಂಡಿದ್ದು, ಆಟಗಾರರು ಭರ್ಜರಿ ತಯಾರಿನಲ್ಲಿ ತೊಡಗಿಕೊಂಡಿದ್ದಾರೆ.
ಅಭ್ಯಾಸ ಅವಧಿಯಲ್ಲಿ, ವಿರಾಟ್ ಕೊಹ್ಲಿ, ರೋಹಿತ್, ಪಂತ್ ಮತ್ತು ಹಾರ್ದಿಕ್ ತರಬೇತಿ ಸಮಯದಲ್ಲಿ ಕಠಿಣ ಪರಿಶ್ರಮವನ್ನು ಕಾಣಬಹುದು. ಕೊಹ್ಲಿ ಏಷ್ಯಾ ಕಪ್ನಲ್ಲಿ ಮತ್ತೆ ಫಾರ್ಮ್ಗೆ ಮರಳಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.
ಭಾರತ ಕ್ರಿಕೆಟ್ ತಂಡ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 20 ರಿಂದ ಮೊಹಾಲಿಯಲ್ಲಿ ನಡೆಯಲಿದೆ.
ಸರಣಿಯ ಮೊದಲ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡದ ಆಟಗಾರರು ಮೊಹಾಲಿ ತಲುಪಿದ್ದಾರೆ. ಆಸ್ಟ್ರೇಲಿಯ ತಂಡ ನಿನ್ನೆಯಷ್ಟೇ ತರಬೇತಿ ಮತ್ತು ಅಭ್ಯಾಸದ ಅವಧಿಯನ್ನು ಆರಂಭಿಸಿದ್ದು, ಭಾರತೀಯ ಆಟಗಾರರು ಇಂದು ಭರ್ಜರಿ ತಾಯಾರಿಯನ್ನು ನಡೆಸುತ್ತಿದೆ.
ಸೆಪ್ಟೆಂಬರ್ 20 ರಂದು ನಡೆಯಲಿರುವ ಮೊದಲ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿಗೆ ಕೊರೋನಾ ಸೋಂಕು ತಗುಲಿದೆ. ಇಂತಹ ಪರಿಸ್ಥಿತಿಯಲ್ಲಿ ಅವರು ಬಹುಶಃ ಮೂರು ಪಂದ್ಯಗಳ ಟಿ20 ಸರಣಿಗೆ ಲಭ್ಯವಾಗುವುದಿಲ್ಲ. ಅವರ ಸ್ಥಾನಕ್ಕೆ ಉಮೇಶ್ ಯಾದವ್ ಸ್ಥಾನ ಪಡೆದಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 3 ಪಂದ್ಯಗಳ ಟಿ20 ಸರಣಿಯು ನಾಳೆಯಿಂದ ಆರಂಭವಾಗಲಿದೆ. ಸರಣಿಯ ಮೊದಲ ಪಂದ್ಯವು ಮೊಹಾಲಿಯಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ.
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಈವರೆಗೆ ಒಟ್ಟು 23 ಅಂತರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದೆ. ಇದರಲ್ಲಿ ಭಾರತ ತಂಡವು ಈವರೆಗೆ 13 ಪಂದ್ಯಗಳನ್ನು ಮತ್ತು ಆಸ್ಟ್ರೇಲಿಯಾ ತಂಡವು 9 ಬಾರಿ ಗೆದ್ದಿದೆ.
ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ಅಕ್ಷರ್ ಪಟೇಲ್, ಯುಜ್ವೇಂದ್ರ ಚಾಹಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.