ಮನೆ ಅಪರಾಧ ಮೈಸೂರು: ಆನೆ ಓಡಿಸಲು ಬಂದ ಅರಣ್ಯ ಸಿಬ್ಬಂದಿ ಮೇಲೆ ಗ್ರಾಮಸ್ಥರ ಹಲ್ಲೆ

ಮೈಸೂರು: ಆನೆ ಓಡಿಸಲು ಬಂದ ಅರಣ್ಯ ಸಿಬ್ಬಂದಿ ಮೇಲೆ ಗ್ರಾಮಸ್ಥರ ಹಲ್ಲೆ

0

ಮೈಸೂರು(Mysuru): ಆನೆ ಓಡಿಸಲು ಬಂದ ಅರಣ್ಯ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ.

ತಾಲೂಕಿನ ಕಾಡಂಚಿನ ಗ್ರಾಮ ಬೂದನೂರಿಗೆ ಸೋಮವಾರ ಸಲಗವೊಂದು ನುಗ್ಗಿದ್ದು, ಹಲವು ಮನೆಗಳಿಗೆ ಹಾನಿ ಮಾಡಿದೆ. ಇದನ್ನು ಓಡಿಸಲು ಬಂದಿದ್ದ ಮೇಟಿಕುಪ್ಪೆ ಅರಣ್ಯ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಬ್ಬಂದಿ ಕೈಯಲ್ಲಿದ್ದ ಬಂದೂಕು ಕಿತ್ತುಕೊಂಡು, ಅದನ್ನು ಮುರಿದು ಹಾಕಿ ಗ್ರಾಮಸ್ಥರು ತಮ್ಮ ಕೋಪ ಹೊರಹಾಕಿದ್ದಾರೆ.

ಗ್ರಾಮಕ್ಕೆ ನುಗ್ಗಿದ್ದ ಕಾಡಾನೆ ಓಡಿಸಲು ತಡವಾಗಿ ಬಂದರು ಎಂಬ ಕಾರಣಕ್ಕೆ ಗ್ರಾಮಸ್ಥರು ಈ ರೀತಿ ವರ್ತಿಸಿದ್ದಾರೆ ಎಂದು ಹೇಳಲಾಗಿದೆ.

ಹೆಚ್ ಡಿ ಕೋಟೆ ಪೊಲೀಸ್ ಠಾಣೆಗೆ ಅರಣ್ಯ ಇಲಾಖೆ ದೂರು ನೀಡಿದೆ.