ಮನೆ ರಾಜ್ಯ ಶ್ರೀರಂಗಪಟ್ಟಣ: ಮಾದಕ ವಸ್ತು ವ್ಯಸನ ಕುರಿತು ಜಾಗೃತಿ ಕಾರ್ಯಕ್ರಮ

ಶ್ರೀರಂಗಪಟ್ಟಣ: ಮಾದಕ ವಸ್ತು ವ್ಯಸನ ಕುರಿತು ಜಾಗೃತಿ ಕಾರ್ಯಕ್ರಮ

0

ಶ್ರೀರಂಗಪಟ್ಟಣ(Srirangapattana): ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಶಿಕ್ಷಣ ಇಲಾಖೆ  ವತಿಯಿಂದ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾದಕ ವಸ್ತು ವ್ಯಸನ ಕುರಿತು ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮವನ್ನು ಅಪರ ಹಿರಿಯ ಸಿವಿಲ್ ನ್ಯಾಯಾಧೀಶರಾದ ಹೆಚ್.ಹನುಮಂತಪ್ಪ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಮಕ್ಕಳು ಮಾದಕ ವಸ್ತುಗಳ ಚಟಕ್ಕೆ ಬೀಳದಂತೆ ಶಿಕ್ಷಕರು ಮತ್ತು ಪೋಷಕರು ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀರಂಗಪಟ್ಟಣ ತಾಲ್ಲೋಕು ಆಯುಷ್ ವೈದ್ಯಧಿಕಾರಿಗಳಾದ ಡಾ ರಮ್ಯ, ಬಿಇಒ ಎಂ.ಆರ್. ಅನಂತರಾಜು, ಪ್ರಾಂಶುಪಾಲ ಜಯಶಂಕರಪ್ಪ, ಪ್ರಾಂಶುಪಾಲ ಅಶೋಕ್ ಕುಮಾರ್,  ಎಸ್.ಡಿ.ಎಂಸಿ ಅಧ್ಯಕ್ಷ ಕೂಡ್ಲುಕುಪ್ಪೆ ಸೋಮಶೇಖರ್ ಉಪಸ್ಥಿತರಿದ್ದರು.