ಮೈಸೂರು(Mysuru) : ಅಪ್ಪಚ್ಚ ಕವಿ ಕೊಡಗಿನ ಒಬ್ಬ ದಾರ್ಶನಿಕ. ದಾಸ ಪರಂಪರೆಗೆ ನಾಂದಿ ಹಾಡಿದ ಮಹಾಕವಿ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿದರು.
ನಗರದ ಕೊಡವ ಸಮಾಜದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಭಾಂಗಣದಲ್ಲಿ ಅಪ್ಪಚ್ಚ ಕವಿ ಜನ್ಮದಿನವನ್ನು ಬುಧವಾರ ಆಚರಿಸಲಾಯಿತು.
ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾತನಾಡಿ, ಅಪ್ಪಚ್ಚ ಕವಿ ಅವರ ನಾಟಕಗಳು, ಕೀರ್ತನೆಗಳು, ಕಾವ್ಯಗಳು ಕನ್ನಡ ಸಾರಸ್ವತ ಲೋಕದ ಅಧ್ಯಯನಕ್ಕೆ ಅತ್ಯಂತ ಯೋಗ್ಯವಾಗಿವೆ. ಅದರ ಚರ್ಚೆ ಮತ್ತು ಅಧ್ಯಯನ ದೃಷ್ಟಿಯನ್ನು ಮುಂದಿನ ಪೀಳಿಗೆಗೆ ಉಳಿಸುವುದಕ್ಕಾಗಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಅಪ್ಪಚ್ಚ ಕವಿ ಅಧ್ಯಯನ ಪೀಠ ರಚನೆಯಾಗಬೇಕು. ಇದಕ್ಕಾಗಿ ಸಮಾಜದವರು ಸರ್ಕಾರವನ್ನು ಒತ್ತಾಯಿಸಬೇಕು ಎಂದು ಕೋರಿದರು.
ಭಾರತೀಯ ರಂಗಭೂಮಿಯಲ್ಲಿ ಪುರಾಣದ ಯಯಾತಿ ಕಥೆಯನ್ನು ನಾಟಕ ರೂಪದಲ್ಲಿ ತಂದ ಮೊದಲ ಭಾರತೀಯ ನಾಟಕಕಾರ ಅಪ್ಪಚ್ಚಕವಿ ಎನ್ನುವುದನ್ನು ರಂಗಭೂಮಿ ತಜ್ಞರು ಮತ್ತು ಕಲಾವಿದರು ಮರೆಯಬಾರದು ಎಂದರು.
ಕನ್ನಡ ಸಾರಸ್ವತ ಲೋಕ ಅಪ್ಪಚ್ಚ ಕವಿಯನ್ನು ಇನ್ನೂ ಸ್ವೀಕರಿಸಿಲ್ಲ. ಅವರ ಸಾಹಿತ್ಯದ ಬಗ್ಗೆ ಗಂಭೀರ ಚರ್ಚೆ ನಡೆಸಿಲ್ಲ. ಕೊಡವ ಭಾಷೆ ಎಂಬ ಕಾರಣಕ್ಕೆ ಹೀಗಾಗಿರಬಹುದು ಎಂದು ವಿಷಾದ ವ್ಯಕ್ತಪಡಿಸಿದರು.
ಭರಣಿ ಕಲಾ ಗ್ಯಾಲರಿ ಅಧ್ಯಕ್ಷ, ಕಲಾವಿದ ನೆಲ್ಲಮಕ್ಕಡ ಕಾವೇರಪ್ಪ ಅಪ್ಪಚ್ಚ ಕವಿಯ ಬದುಕು–ಬರಹದ ಬಗ್ಗೆ ಮಾತನಾಡಿದರು.
ಸಮಾಜದ ಅಧ್ಯಕ್ಷ ಮೇಚಂಡ ಶಶಿ ಪೊನ್ನಪ್ಪ ಸ್ವಾಗತಿಸಿದರು. ಕೊಡವ ಸಮಾಜ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಲಬ್ನ ಅಧ್ಯಕ್ಷ ಕುಟ್ಟಿಮಾಡ ಮುತ್ತಪ್ಪ, ಪದಾಧಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.