ಕಲಬುರಗಿ(Kalburgi): ಮರಳು ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಪೊಲೀಸರನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಜೇವರ್ಗಿ ಠಾಣೆ ಇನ್ಸ್ಪೆಕ್ಟರ್ ಶಿವಪ್ರಸಾದ ಮಠದ, ಜೇವರ್ಗಿ ಎಸ್ಪಿ ಬೀಟ್ ಕಾನ್ಸ್ಟೇಬಲ್ ಶಿವರಾಯ ಅರಳಗುಂಡಗಿ ಹಾಗೂ ಪಿಐ ವಾಹನ ಚಾಲಕ ಅವಣ್ಣ ಲೋಕಾಯುಕ್ತರ ಬಲೆಗೆ ಬಿದ್ದವರು.
ಶಹಾಪುರದ ಮರಳು ವ್ಯಾಪಾರಿ ಅಖಿಲ್ ಎಂಬುವರ ದೂರಿನ ಮೇರೆಗೆ ದಾಳಿ ನಡೆಸಲಾಗಿದೆ.
ಮರಳು ವ್ಯಾಪಾರಿ ಅಖಿಲ್ ಅವರ ಬಳಿ 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ ಶಿವರಾಯ ಅರಳಗುಂಡಗಿ, ಜೇವರ್ಗಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಹಣ ಪಡೆಯುವಾಗ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ವೇಳೆ ಶಿವರಾಯ ಹಣದ ಸಮೇತ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಲೋಕಾಯುಕ್ತ ಪೊಲೀಸರು ಬೆನ್ನಟ್ಟಿ ಅವರನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್ ನೆಲಕ್ಕೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಶಿವರಾಯನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಲಂಚದ ಹಣದಲ್ಲಿ ಇನ್ಸ್ಪೆಕ್ಟರ್ ಹಾಗೂ ಅವರ ವಾಹನ ಚಾಲಕನ ಪಾಲು ಇರುವುದನ್ನು ಹೇಳಿದ್ದಾನೆ. ಆಗ ಶಿವರಾಯನಿಂದಲೇ ಇನ್ಸ್ಪೆಕ್ಟರ್ಗೆ ಕರೆ ಮಾಡಿಸಿದಾಗ ಹಣ ತೆಗೆದುಕೊಂಡು ಬರುವಂತೆ ಇನ್ಸ್ಪೆಕ್ಟರ್ ಶಿವಪ್ರಸಾದ್ ಹೇಳಿದ್ದಾರೆ.
ಇದನ್ನೇ ದಾಖಲೆಯಾಗಿ ಇಟ್ಟುಕೊಂಡ ಲೋಕಾಯುಕ್ತ ಅಧಿಕಾರಿಗಳು ಕಲಬುರಗಿಯಿಂದ ಜೇವರ್ಗಿ ಕಡೆಗೆ ಹೊರಟಿದ್ದ ಇನ್ಸ್ಪೆಕ್ಟರ್ ಶಿವಪ್ರಸಾದ್ ಹಾಗೂ ಚಾಲಕ ಅವಣ್ಣನನ್ನು ನಂದಿಕೂರ ಬಳಿ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜೇವರ್ಗಿಯ ಸರ್ಕಿಟ್ ಹೌಸ್ನಲ್ಲಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.