ಬೆಂಗಳೂರು(Bengaluru): ಪ್ರಸ್ತುತ 11, 137 ಪೌರ ಕಾರ್ಮಿಕರ ಹುದ್ದೆಗಳನ್ನು ಖಾಯಂಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪೌರಕಾರ್ಮಿಕರ ದಿನಾಚರಣೆಯ ಅಂಗವಾಗಿ ಇಂದು ಬೆಳಗಿನ ಉಪಾಹಾರವನ್ನು ಪೌರಕಾರ್ಮಿಕರೊಂದಿಗೆ ಮುಖ್ಯ ಮಂತ್ರಿಗಳು ಸೇವಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಪೌರಕಾರ್ಮಿಕರಿಗೆ ಸೇವಾ ಭದ್ರತೆ ಇರದಿದ್ದ ಕಾರಣ ಸಮಿತಿ ರಚಿಸಲಾಗಿತ್ತು. ಸಮಿತಿಯ ಶಿಫಾರಸ್ಸಿನಂತೆ ಹಂತ ಹಂತವಾಗಿ ಸುಮಾರು 43 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಆದೇಶಿಸಲಾಗಿತ್ತು. ಅದರಲ್ಲಿ 11,137 ಪೌರಕಾರ್ಮಿಕರ ಹುದ್ದೆಗಳನ್ನು ಖಾಯಂಗೊಳಿಸಲಾಗಿದೆ. 2 ನೇ ಹಾಗೂ 3 ನೇ ಕಂತಿನಲ್ಲಿ ಪೂರ್ತಿ ಮಾಡಲಾಗುವುದು ಎಂದರು.
ಪೌರಕಾರ್ಮಿಕರು ಅತ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಾರೆ. ಅವರಲ್ಲಿ ಆತ್ಮವಿಶ್ವಾಸ ಮತ್ತು ಆತ್ಮಗೌರವ ತುಂಬಬೇಕು. ಸರ್ಕಾರದ ಈ ಉಪಕ್ರಮದಿಂದ ಈ ವರ್ಗದ ಜನರಲ್ಲಿ ಆತ್ಮವಿಶ್ವಾಸ ತುಂಬಿದೆ. ಇಷ್ಟು ವರ್ಷದ ನಮ್ಮ ಕಠಿಣ ಪರಿಶ್ರಮಕ್ಕೆ ನ್ಯಾಯ ಸಿಕ್ಕಿರುವ ಭಾವನೆ ಇದೆ. ಮಾನವೀಯತೆಯಿಂದ ಅವರ ಭಾವನೆಗಳಿಗೆ ಗೌರವ ನೀಡಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.