ಬೆಂಗಳೂರು(Bengaluru): ಪಿಎಸ್ಐ ಹಗರಣ ಬಯಲಿಗೆ ಎಳೆದದ್ದೇ ಕಾಂಗ್ರೆಸ್. ಸಿಐಡಿ ದಾಳಿ ನಂತರ ಎಡಿಜಿಪಿ ಅಮೃತ್ ಪೌಲ್ ಅವರನ್ನು ವರ್ಗಾವಣೆ ಮಾಡಿದ್ದರು. ಒತ್ತಡ ಹೆಚ್ಚಾದ ಮೇಲೆ ಬಂಧಿಸಿದರು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಕಲಾಪ ಮುಂದೂಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದ ಅವರು, ಪಿಎಸ್ಐ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ಎಡಿಜಿಪಿ ಅಮೃತ್ ಪೌಲ್ ಅವರು ನೇಮಕವಾಗಿದ್ದೇ ಬಸವರಾಜ ಬೊಮ್ಮಾಯಿ ಅವರು ಗೃಹ ಸಚಿವರಾಗಿದ್ದಾಗ. ಪೌಲ್ ಬಗ್ಗೆ ದೂರುಗಳಿದ್ದರೂ, ಪ್ರಮುಖ ಹುದ್ದೆ ನೀಡಿದ್ದರು ಎಂದು ದೂರಿದರು.
ಇಲ್ಲಿಯವರೆಗೂ ಎಜಿಡಿಪಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಸಿಆರ್ಪಿಸಿ 164ರ ಹೇಳಿಕೆ ಕೊಡಿಸಿಲ್ಲ. ಅವರ ಮಂಪರು ಪರೀಕ್ಷೆ ಆಗಬೇಕು. ಆಗ ಇದರ ಹಿಂದೆ ಇರುವ ರಾಜಕಾರಣಿಗಳ ಹೆಸರು ಬಯಲಿಗೆ ಬರುತ್ತದೆ ಎಂದರು.
ಬಿಜೆಪಿ ಶಾಸಕ ಬಸವರಾಜ ದಢೇಸೂಗುರ್ ಅವರು ಆಡಿಯೊದಲ್ಲಿನ ಧ್ವನಿ ನನ್ನದೆ, ನಾನು ₹ 15 ಲಕ್ಷ ತೆಗೆದುಕೊಂಡಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾನೆ. ಲಂಚ ಕೊಟ್ಟವರನ್ನೇ ಹೆದರಿಸಿದ್ದಾನೆ. ಅವನ ವಿಚಾರಣೆ ಮಾಡಿಲ್ಲ. ಬಸನಗೌಡ ಪಾಟೀಲ್ ಯತ್ನಾಳ್ ಅವರು ಈ ಹಗರಣದಲ್ಲಿ ಒಬ್ಬ ಮಾಜಿ ಮುಖ್ಯಮಂತ್ರಿ ಮಗನ ಕೈವಾಡವಿದೆ ಎಂದು ಹೇಳಿದ್ದಾರೆ. ಕೈವಾಡವಿರುವುದು ಯಡಿಯೂರಪ್ಪ ಅವರ ಮಗನಾ? ದೇವೇಗೌಡ, ಸಿದ್ದರಾಮಯ್ಯನ ಮಗನಾ ಎಂದು ಪ್ರಶ್ನಿಸಿದರು.
ಲಂಚದ ಹಣವನ್ನು ಸರ್ಕಾರಕ್ಕೆ ನೀಡಿದ್ದೇನೆ ಎಂದು ದಢೇಸೂಗುರ್ ಹೇಳಿದ್ದಾರೆ. ಈಗ ಯಾವ ಸರ್ಕಾರ ಇದೆ? ಹಣಕೊಟ್ಟಿರುವುದು ಮುಖ್ಯಮಂತ್ರಿಗಾ? ಗೃಹ ಸಚಿವರಿಗಾ? ಹಗರಣದಲ್ಲಿ 92 ಜನರ ಬಂಧನವಾಗಿದೆ. ಆದರೆ, ಅವರಲ್ಲಿ ಒಬ್ಬ ರಾಜಕಾರಣಿಯೂ ಇಲ್ಲವೇ ಎಂದು ಕುಟುಕಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.