ಚಿಕ್ಕಬಳ್ಳಾಪುರ(Chikkaballapura): ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂದು ನಿಡುಮಾಮಿಡಿ ಮಹಾಸಂಸ್ಥಾನದ ಶ್ರೀ ವೀರಭದ್ರ ಚೆನ್ನಮಲ್ಲ ಮಹಾಸ್ವಾಮೀಜಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಗೌರಿಬಿದನೂರಿನಲ್ಲಿ ಮಾತನಾಡಿದ ಶ್ರೀ ವೀರಭದ್ರ ಚೆನ್ನಮಲ್ಲ ಮಹಾಸ್ವಾಮೀಜಿ ಅವರು, ಫ್ಯಾಸಿಸ್ಟ್ ಸಂಸ್ಕೃತಿಯ ಜನರು ಸಂಶೋಧಕ ಡಾ. ಎಂ.ಎಂ ಕಲಬುರ್ಗಿ, ಪತ್ರಕರ್ತೆ ಗೌರಿ ಲಂಕೇಶರ್ ಅವರನ್ನು ಹತ್ಯೆ ಮಾಡಿದ ಮಾದರಿಯಲ್ಲೇ ಇನ್ನೂ ಹಲವರ ಹತ್ಯೆಗೆ ಸಂಚು ರೂಪಿಸಿದ್ದರು. ಸಿದ್ದರಾಮಯ್ಯನವರು ಹಿಟ್ ಲಿಸ್ಟ್ನಲ್ಲಿದ್ದು, ಅವರಿಗೆ ತೀವ್ರವಾದ ಬೆದರಿಕೆ ಇತ್ತು. ದೇವರ ಕೃಪೆ ಕೊಲ್ಲುವವನು ಒಬ್ಬ ಇದ್ರೆ, ಕಾಯುವವನೂ ಒಬ್ಬ ಇರುತ್ತಾನೆ ಎಂದರು.
ನಾನು ಹೋದ್ರೆ ನಿಡುಮಾಮಿಡಿ ಅಂತ ಒಂದು ದಿನ ಮೇಣದ ಬತ್ತಿ ಹಚ್ಚಿ ಬಿಡುತ್ತೀರಿ. ಸಿದ್ದರಾಮಯ್ಯನವರು ಹೋದ್ರೂ ಒಂದು ದಿನ ಮೇಣದ ಬತ್ತಿ ಹಚ್ಚಿ ಬಿಡುತ್ತೀವಿ. ಸತ್ತ ಮೇಲೆ ಮೇಣದ ಬತ್ತಿ ಹಚ್ಚಿ ಸಮಾಧಾನ ಪಡುವ ಬದಲು ಬದುಕಿದ್ದಾಗ ಅವರಿಗೆ ಶಕ್ತಿ ತುಂಬಿ. ಅಧಿಕಾರವನ್ನು ಅವರಿಗೆ ಕೊಟ್ಟು, ಸಮಾಜದಲ್ಲಿ ಬದಲಾವಣೆ ತನ್ನಿ ಎಂದು ಹೇಳಿದರು.
ಯಾವ ಪಕ್ಷದಿಂದಲೂ ಭ್ರಷ್ಟಾಚಾರ ನಿವಾರಿಸಲು ಆಗುವುದಿಲ್ಲ. ಈ ಬಾರಿಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರಿಸಿಕೊಳ್ಳಿ. ಗಣನೀಯವಾಗಿ ಭ್ರಷ್ಟಚಾರ ತಗ್ಗಿಸುವುದಾಗಿ ಭರವಸೆ ನೀಡಿ. ಆಗಿರುವ ಅನ್ಯಾಯ ಸರಿಪಡಿಸುವುದಾಗಿ ಪ್ರಣಾಳಿಕೆಯಲ್ಲಿ ಹೇಳಿ. ಜನ ಖಂಡಿತವಾಗಿ ಕಾಂಗ್ರೆಸ್’ನ್ನು ಸ್ವಾಗತಿಸುತ್ತಾರೆ ಎಂದು ಸ್ವಾಮೀಜಿಗಳು ತಿಳಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.