ಮನೆ ಅಪರಾಧ ಐಎಸ್ ಸಂಘಟನೆ ನಂಟು: ಹಣ್ಣಿನ ವ್ಯಾಪಾರಿ ಶಬ್ಬೀರ್ ಶಿವಮೊಗ್ಗ ಪೊಲೀಸರ ವಶಕ್ಕೆ

ಐಎಸ್ ಸಂಘಟನೆ ನಂಟು: ಹಣ್ಣಿನ ವ್ಯಾಪಾರಿ ಶಬ್ಬೀರ್ ಶಿವಮೊಗ್ಗ ಪೊಲೀಸರ ವಶಕ್ಕೆ

0

ಗಂಗಾವತಿ(Gangavathi): ನಿಷೇಧಿತ ಐಎಸ್‌ ಸಂಘಟನೆ ಜೊತೆ ನಂಟು ಹೊಂದಿದ ಆರೋಪದಡಿ ಮೈಬೂಬ್‌ ನಗರದ ನಿವಾಸಿ, ಬಾಳೆಹಣ್ಣಿನ ವ್ಯಾಪಾರಿ ಶಬ್ಬೀರ್‌ ಎಂಬಾತನನ್ನು ಶಿವಮೊಗ್ಗ ಪೊಲೀಸರು ಭಾನುವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಶಬ್ಬೀರನನ್ನು ವಶಕ್ಕೆ ಪಡೆದು ರಾತ್ರಿಯೇ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್‌ ಮೂಲಗಳು ಖಚಿತಪಡಿಸಿವೆ.

ತುಂಗೆ ದಡದಲ್ಲಿ ಬಾಂಬ್‌ ಸ್ಫೋಟ ಪ್ರಯೋಗ ನಡೆಸಿದ್ದ ಯುವಕರ ಮೊಬೈಲ್‌ನಲ್ಲಿ ಶಬ್ಬೀರ್‌ ಜೊತೆ ಮಾತನಾಡಿದ ಕರೆ ದಾಖಲೆಗಳು ಪತ್ತೆಯಾಗಿವೆ. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.