ಮೈಸೂರು(Mysuru): ಚಾಮುಂಡಿಬೆಟ್ಟದಲ್ಲಿ ನಾಡಹಬ್ಬಕ್ಕೆ ಚಾಲನೆ ನೀಡುವ ಸಂದರ್ಭದಲ್ಲೇ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸುವುದು ಸಂಪ್ರದಾಯ. ಆದರೆ ಈ ಬಾರಿ ದಸರಾ ಕ್ರೀಡಾಕೂಟಕ್ಕೆ ಉದ್ಘಾಟನಾ ಭಾಗ್ಯವಿಲ್ಲ.
ಈ ಬಾರಿ ಕ್ರೀಡಾಕೂಟ ಉದ್ಘಾಟನೆಯನ್ನು ಸೆ.29ಕ್ಕೆ ಮುಂದೂಡಲಾಗಿದೆ. ಒಲಿಂಪಿಯನ್, ಕುಸ್ತಿಪಟು ಸಾಕ್ಷಿ ಮಲ್ಲಿಕ್ ಅವರನ್ನು ಕ್ರೀಡಾಕೂಟ ಉದ್ಘಾಟಿಸಲು ಆಹ್ವಾನಿಸಲಾಗಿದೆ.
ಕ್ರೀಡಾಕೂಟದ ಸ್ಥಳ, ಸ್ಪರ್ಧೆಗಳ ಪಟ್ಟಿಯೇ ಸಿದ್ಧಗೊಂಡಿಲ್ಲ. ಅನುದಾನ, ವಿಜೇತರ ಬಹುಮಾನದ ಮೊತ್ತವೂ ನಿಗದಿಯಾಗಿಲ್ಲ. ಕೊರೊನಾದಿಂದಾಗಿ ಕ್ಷೀಣವಾಗಿದ್ದ ಕ್ರೀಡಾ ಚಟುವಟಿಕೆಗಳಿಗೆ ಈ ಬಾರಿಯ ದಸರಾದಲ್ಲಿ ಹುರುಪು ಸಿಗಬಹುದು ಎಂಬ ಕ್ರೀಡಾಪಟುಗಳ ಕನಸು ನನಸಾಗಿಲ್ಲ.
ಈ ಹಿಂದಿನ ಕ್ರೀಡಾಕೂಟಗಳಲ್ಲಿ ಗೆದ್ದ ಕೆಲವರಿಗೆ ಇದುವರೆಗೂ ಬಹುಮಾನ ಸಿಕ್ಕಿಲ್ಲ. ಈ ಬಾರಿಯೂ ಟಿ ಶರ್ಟ್, ಭತ್ಯೆಗೆ ಪರದಾಡಬೇಕಾಗಬಹುದೆಂಬ ಆತಂಕವೂ ಕ್ರೀಡಾಪಟುಗಳಲ್ಲಿದೆ.
ನಾಡಹಬ್ಬಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಲಿರುವುದರಿಂದ ಭದ್ರತೆಯ ಸಲುವಾಗಿ ಹಾಗೂ ಅತಿಥಿಗಳ ದಿನಾಂಕದಲ್ಲಿ ವ್ಯತ್ಯಾಸವಾಗಿದ್ದರಿಂದ ಕ್ರೀಡಾಕೂಟವನ್ನು ಮುಂದೂಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಮಾಹಿತಿ ನೀಡಿದ್ದಾರೆ.
ದಸರಾ ಕ್ರೀಡಾಕೂಟವನ್ನು 10 ದಿನವೂ ನಡೆಸಬೇಕು. ನಾಲ್ಕು ದಿನದ ತರಾತುರಿಯ ಆಯೋಜನೆಯೂ ಸರಿಯಲ್ಲ ಎಂದು ರಾಜ್ಯ ಸೈಕ್ಲಿಂಗ್ ಸಂಸ್ಥೆ ಅಧ್ಯಕ್ಷ ರಾಜು ಬಿರಾದಾರ್ ಬೇಸರ ವ್ಯಕ್ತಪಡಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.