ಬೆಂಗಳೂರು(Bengaluru): ಪೇ ಸಿಎಂ ಅಭಿಯಾನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಳಚುವ ಪೋಸ್ಟರ್ ಹೊರತು, ಇದಕ್ಕೆ ಇನ್ನೇನೋ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಕಾಂಗ್ರೆಸ್ ಯಾವುದೇ ಸಮುದಾಯವನ್ನು ಗುರಿಯಾಗಿಸುವ ಪ್ರಯತ್ನ ಮಾಡುತ್ತಿಲ್ಲ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಲಿಂಗಾಯತ ಸಮುದಾಯದ ಟಾರ್ಗೆಟ್ ವಿಚಾರ ಪೇ ಸಿಎಂ ಸಮರ್ಥನೆಗೆ ಮಾಡಿಕೊಂಡಿರುವ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್ ಮಾಡಿದ್ದಾರೆ.
ಬಿಜೆಪಿಯವರು ಸಿಎಂ ವಿರುದ್ಧದ ಈ ಅಭಿಯಾನವನ್ನು ಲಿಂಗಾಯತ ವಿರೋಧಿ ಎಂದು ಬ್ರ್ಯಾಂಡ್ ಮಾಡುತ್ತಿರುವುದು ಹತಾಶ ಮನಸ್ಥಿತಿಯ ಪ್ರತೀಕ. ಪೇ ಸಿಎಂ ಅಭಿಯಾನ ಹೇಗೆ ಲಿಂಗಾಯತ ವಿರೋಧಿ ಆಗುತ್ತದೆ? ಬಿಜೆಪಿಯ ಲಾಜಿಕ್ ಏನು? ಬೊಮ್ಮಾಯಿ ವಿರುದ್ಧದ ಈ ಅಭಿಯಾನವನ್ನು ಲಿಂಗಾಯತ ವಿರೋಧಿ ಎಂಬಂತೆ ಬಿಂಬಿಸಿ ಬಿಜೆಪಿ, ಸತ್ಯವನ್ನು ಡೈವರ್ಟ್ ಮಾಡುತ್ತಿದೆ ಎಂದು ದೂರಿದ್ದಾರೆ.
ಆದರೆ ಬಿಜೆಪಿಯವರಷ್ಟು ಲಿಂಗಾಯತ ವಿರೋಧಿಗಳು ಯಾರಿದ್ದಾರೆ? ಲಿಂಗಾಯತ ಸಮುದಾಯದ ಪ್ರಶ್ನಾತೀತ ನಾಯಕ ಯಡಿಯೂರಪ್ಪರನ್ನು ಸಿಎಂ ಪದವಿಯಿಂದ ಕೆಳಗಿಳಿಸಿ ಕಣ್ಣೀರು ಹಾಕಿಸಿದ್ದು, ಲಿಂಗಾಯತ ಸಮುದಾಯಕ್ಕೆ ಮಾಡಿದ ದ್ರೋಹವಲ್ಲವೇ? ಬೊಮ್ಮಾಯಿ ಸರ್ಕಾರದ ಮೇಲಿರೋ ಭ್ರಷ್ಟಾಚಾರದ ಕಳಂಕದಿಂದ ಲಿಂಗಾಯತ ಮತಗಳು ಕೈತಪ್ಪಿ ಹೋಗುವ ಆತಂಕ ಬಿಜೆಪಿಯವರನ್ನು ಕಾಡುತ್ತಿದೆ. ಹಾಗಾಗಿ ಬೊಮ್ಮಾಯಿಯವರ ಲಿಂಗಾಯತ ಕಾರ್ಡ್ ಬಳಸಿ ಅನುಕಂಪ ಗಿಟ್ಟಿಸುವ ಕೀಳು ತಂತ್ರಕ್ಕೆ ಬಿಜೆಪಿ ಮುಂದಾಗಿದೆ. ಭ್ರಷ್ಟಾಚಾರಿಗಳಿಗೆ ಯಾವುದೇ ಜಾತಿ, ಸಮೂದಾಯ ಇರುವುದಿಲ್ಲ. ಭ್ರಷ್ಟರದ್ದೇ ಒಂದು ಜಾತಿ. ಅದರ ಹೆಸರೇ ಬಿಜೆಪಿ ಎಂದು ಟೀಕಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.