ಮನೆ ರಾಜ್ಯ ಪಿಎಫ್’ಐ ನಿಷೇಧ ಸ್ವಾಗತಾರ್ಹ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಪಿಎಫ್’ಐ ನಿಷೇಧ ಸ್ವಾಗತಾರ್ಹ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

0

ಉಡುಪಿ(Udupi): ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಿಗಿಸಿಕೊಂಡಿರುವ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿರುವುದು ಸ್ವಾಗತಾರ್ಹ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿ, ‘ಸಮಾಜದಲ್ಲಿ ವಿದ್ವಂಸಕ ಕೃತ್ಯ ನಡೆಸುವ ದುಷ್ಟ ಶಕ್ತಿಗಳು ಮರು ಹುಟ್ಟು ಪಡೆಯದಂತೆ ಸರ್ಕಾರ ಜಾಗ್ರತೆ ವಹಿಸಬೇಕು. ಸಾಮಾಜಿಕ ಸಂಘಟನೆಗಳು, ರಾಜಕೀಯ ಪಕ್ಷಗಳು ದೇಶವಿರೋಧಿ ಸಂಘಟನೆಗಳ ಪರವಾಗಿ ನಿಲ್ಲಬಾರದು. ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸಬೇಕು’ ಎಂದು ಸ್ವಾಮೀಜಿ ಅಭಿಪ್ರಾಯಪಟ್ಟರು.