ಮನೆ ಸುದ್ದಿ ಜಾಲ ಕೃಷ್ಣಾ ನದಿ ನೀರು ಹಂಚಿಕೆ ತೀರ್ಪು: ಕೇಂದ್ರದಿಂದ ಶೀಘ್ರ ಅಧಿಸೂಚನೆ

ಕೃಷ್ಣಾ ನದಿ ನೀರು ಹಂಚಿಕೆ ತೀರ್ಪು: ಕೇಂದ್ರದಿಂದ ಶೀಘ್ರ ಅಧಿಸೂಚನೆ

0

ಬಾಗಲಕೋಟೆ(Bagalakote): ಕೃಷ್ಣಾ ನದಿ ನೀರು ಹಂಚಿಕೆ ತೀರ್ಪು ಕುರಿತು ಕೇಂದ್ರ ಶೀಘ್ರ ಅಧಿಸೂಚನೆ ಹೊರಡಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು.

ಶುಕ್ರವಾರ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಸುದ್ದಿಗಾರರೊಂದಿಗೆ ಮಾತನಾಡಿದ‌ ಅವರು, ತೀರ್ಪು ಆಕ್ಷೇಪಣೆ ವಿಚಾರಣೆಗೆ ಸುಪ್ರೀಂ ಕೋರ್ಟ್ ನಲ್ಲಿ ಶೀಘ್ರ ವಿಶೇಷ ಬೆಂಚ್ ಸ್ಥಾಪನೆಯಾಗಲಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರದ ನ್ಯಾಯಾದೀಶರು ಹಿಂದೆ ಸರಿದಿದ್ದು, ಹೊಸ ನ್ಯಾಯಾಧೀಶರ ನೇಮಕಕ್ಕೆ ಅರ್ಜಿ ಸಲ್ಲಿಸಲಾಗಿದೆ. ಮುಂದಿನ ತಿಂಗಳು ವಿಚಾರಣೆ ಆರಂಭವಾಗಲಿದೆ ಎಂದರು.

ಯುಕೆಪಿ ಮೂರನೇ‌ ಹಂತದ ಕಾಮಗಾರಿಗೆ ಈಗಾಗಲೇ ಭೂಸ್ವಾಧೀನ ಮಾಡಿಕೊಳ್ಳಲಾಗುತ್ತಿದೆ. ಕೃಷ್ಣಾ ಭಾಗ್ಯ ಜಲ ನಿಗಮ ಕಚೇರಿ ಆಲಮಟ್ಟಿಗೆ ಸ್ಥಳಾಂತರ ಕಾರ್ಯ ಜನವರಿಯೊಳಗೆ ಆಗಲಿದೆ ಎಂದು ಹೇಳಿದರು.

ಸಚಿವ‌ ಸಂಪುಟ ವಿಸ್ತರಣೆ‌ಯನ್ನು ಬಗ್ಗೆ ಚರ್ಚಿಸಲು‌ ದೆಹಲಿಗೆ ಹೋಗುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಜಲಸಂಪನ್ಮೂಲ‌ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಇದ್ದರು.