ನವದೆಹಲಿ(Newdelhi): ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪಚುನಾವಣೆ ನಡೆಯಲಿದೆ.
ಮಹಾರಾಷ್ಟ್ರ, ಒಡಿಶಾ, ಹರಿಯಾಣ, ತೆಲಂಗಾಣ, ಉತ್ತರ ಪ್ರದೇಶದ ತಲಾ ಒಂದೊಂದು ಮತ್ತು ಬಿಹಾರದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
ನವೆಂಬರ್ 6 ರಂದು ಫಲಿತಾಂಶ ಪ್ರಕಟವಾಗಲಿದೆ. ಉಮೇದುವಾರಿಕೆ ಸಲ್ಲಿಸಲು ಅಕ್ಟೋಬರ್ 14 ಕಡೇ ದಿನವಾಗಿದ್ದು, ಅ.17ರ ಒಳಗಾಗಿ ನಾಮಪತ್ರ ಹಿಂಪಡೆಯಬಹುದು ಎಂದು ಭಾರತೀಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ ವೇಳಾಪಟ್ಟಿಯಲ್ಲಿ ಉಲ್ಲೇಖವಾಗಿದೆ.
ಯಾವ ಕ್ಷೇತ್ರಗಳಿಗೆ ಚುನಾವಣೆ?
ಮಹಾರಾಷ್ಟ್ರ – ಅಂಧೇರಿ ಪೂರ್ವ
ಬಿಹಾರ– ಮೊಕಾಮ ಮತ್ತು ಗೋಪಿಗಂಜ್
ಹರಿಯಾಣ– ಅದಮ್ಪುರ
ತೆಲಂಗಾಣ – ಮುನಗೋಡೆ
ಉತ್ತರ ಪ್ರದೇಶ – ಗೋಲಾ ಗೋಕರ್ಣನಾಥ
ಒಡಿಶಾ – ಧಾಮನಗರ (ಎಸ್ಸಿ)
ಈ ಚುನಾವಣೆಗಳಿಗೆ ವಿದ್ಯುನ್ಮಾನ ಮತಯಂತ್ರಗಳನ್ನು ಬಳಸಲಾಗುವುದು ಎಂದು ಚುನಾವಣಾ ಆಯೋಗ ಹೇಳಿದೆ.
“ಸಾಕಷ್ಟು ಸಂಖ್ಯೆಯ ಇವಿಎಂಗಳು ಮತ್ತು ವಿವಿಪ್ಯಾಟ್ಗಳನ್ನು (ಮತದಾರರ ದೃಢೀಕರಿಸಿದ ಪೇಪರ್ ಆಡಿಟ್ ಟ್ರಯಲ್) ಲಭ್ಯಗೊಳಿಸಲಾಗಿದೆ ಮತ್ತು ಈ ಯಂತ್ರಗಳ ಸಹಾಯದಿಂದ ಚುನಾವಣೆಗಳು ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಇಸಿಐ ಕಾರ್ಯದರ್ಶಿ ಸಂಜೀವ್ ಕುಮಾರ್ ಪ್ರಸಾದ್ ಹೇಳಿದ್ದಾರೆ.
ಚುನಾವಣಾ ಆಯೋಗ ಪ್ರಕಾರ, ಮತದಾರರ ಗುರುತಿನ ಪರಿಶೀಲನೆಗಾಗಿ ಚುನಾವಣಾ ಫೋಟೋ ಗುರುತಿನ ಚೀಟಿ ಅಥವಾ ಮತದಾರರ ಕಾರ್ಡ್ ಪ್ರಾಥಮಿಕ ದಾಖಲೆಯಾಗಿದೆ. ಆದಾಗ್ಯೂ, ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಡ್ರೈವಿಂಗ್ ಲೈಸೆನ್ಸ್ನಂತಹ ಇತರ ಅಧಿಕೃತ ಗುರುತಿನ ದಾಖಲೆಗಳನ್ನು ಸಹ ಸ್ವೀಕರಿಸಲಾಗುತ್ತದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.