ಮನೆ ರಾಜಕೀಯ ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರವಿದೆ: ರಾಹುಲ್ ಗಾಂಧಿ

ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರವಿದೆ: ರಾಹುಲ್ ಗಾಂಧಿ

0

ಮಂಡ್ಯ(Mandya): ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರವಿದೆ. ರೈತರು ಕಾರ್ಮಿಕರಿಂದಲೂ ಶೇ.40 ರಷ್ಟು ಕಮಿಷನ್ ಪಡೆಯುತ್ತಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಭಾರತ್ ಜೋಡೋ ಯಾತ್ರೆ ಉದ್ಧೇಶಿಸಿ ಮಾತನಾಡಿದ ಅವರು, ಶೇ. 40 ರಷ್ಟು ಕಮಿಷನ್ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಪ್ರತಿಯೊಬ್ಬರಿಂದಲೂ 40 ಪರ್ಸೆಂಟ್ ತೆಗೆದುಕೊಳ್ಳುತ್ತಾರೆ. ರೈತರು ಕಾರ್ಮಿಕರಿಂದಲೂ 40 ಕಮಿಷನ್ ಪಡೆಯುತ್ತಾರೆ. ಇಂತಹ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಡಬೇಕು ಎಂದು ಹೇಳಿದರು.