ಮನೆ ಸುದ್ದಿ ಜಾಲ ದಸರಾ ವೈಭವ: ಯದುವೀರ್ ಒಡೆಯರ್ ಅವರಿಂದ ಬನ್ನಿ ಮರಕ್ಕೆ ಪೂಜೆ ಸಲ್ಲಿಕೆ

ದಸರಾ ವೈಭವ: ಯದುವೀರ್ ಒಡೆಯರ್ ಅವರಿಂದ ಬನ್ನಿ ಮರಕ್ಕೆ ಪೂಜೆ ಸಲ್ಲಿಕೆ

0

ಮೈಸೂರು(Mysuru): ಮೈಸೂರು ಅರಮನೆಯಲ್ಲಿ ದಸರಾ ಸಂಭ್ರಮ ಮನೆ ಮಾಡಿದ್ದು ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ್ ವಿಜಯಯಾತ್ರೆ ಬಳಿಕ ಭುವನೇಶ್ವರಿ ದೇಗುಲದಲ್ಲಿರುವ  ಬನ್ನಿಮರಕ್ಕೆ ಪೂಜೆ ಸಲ್ಲಿಸಿದರು.

ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ದಸರಾ ವೈಭವ ಕಳೆಗಟ್ಟಿದ್ದು, ಇಂದು ಐತಿಹಾಸಿಕ ಜಂಬೂಸವಾರಿ ನಡೆಯಲಿದೆ.

ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನ ತೆರೆದ ವಾಹನದಲ್ಲಿ ಮೈಸೂರು ಅರಮನೆಯತ್ತ  ತರಲಾಗುತ್ತಿದೆ.