ಬೆಂಗಳೂರು(Bengaluru): ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್ʼನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು ಎಂದು ಕಿಡಿಕಾರಿದ್ದಾರೆ.
ಈ ವಿಷಯದಲ್ಲಿ ನಮ್ಮ 2 ಬೇಡಿಕೆಗಳಿವೆ. ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು. ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು ಎಂದು ಹೆಚ್ ಡಿಕೆ ಆಗ್ರಹಿಸಿದ್ದಾರೆ.
ಕನ್ನಡದಲ್ಲೇ ಪರಿಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.