ಬೆಳಗಾವಿ(Belagavi): ತಾಲ್ಲೂಕಿನ ಸುಳೇಭಾವಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದ ಜೋಡಿ ಕೊಲೆಯಿಂದ ಬೆಚ್ಚಿಬಿದ್ದ ಹಲವು ಜನ ತಡರಾತ್ರಿಯೇ ಊರು ತೊರೆದಿದ್ದು, ಶುಕ್ರವಾರ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.
ಸುಳೇಭಾವಿಯ ರಣಧೀರ ಅಲಿಯಾಸ್ ಮಹೇಶ ಮುರಾರಿ (26) ಹಾಗೂ ಪ್ರಕಾಶ ಹುಂಕರಿ ಪಾಟೀಲ (24) ಅವರನ್ನು ರಾತ್ರಿ ಕೊಲೆ ಮಾಡಲಾಗಿದೆ.
ಗ್ರಾಮದ ಶಿವಾಜಿ ಸರ್ಕಲ್’ನಲ್ಲಿ ನಿಂತಿದ್ದ ಇಬ್ಬರ ಮೇಲೆ ದಾಳಿ ಮಾಡಿದ ಗುಂಪು, ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿತು. ತಲೆ, ಕುತ್ತಿಗೆ, ಎದೆ ಭಾಗಕ್ಕೆ ಪೆಟ್ಟುಬಿದ್ದು ತೀವ್ರ ರಕ್ತಸ್ರಾವದಿಂದ ಇಬ್ಬರೂ ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದರು.
ಇದರಿಂದ ಬೆಚ್ಚಿಬಿದ್ದ ಗ್ರಾಮದ ಹಲವರು ಮನೆಗಳಿಗೆ ಬೀಗ ಜಡಿದು ಊರು ಬಿಟ್ಟಿದ್ದಾರೆ. ಕೊಲೆ ನಡೆದ ಲಕ್ಷ್ಮಿ ನಗರದಲ್ಲಂತೂ ಸ್ಮಶಾನ ಮೌನ ಆವರಿಸಿದೆ. ನೂರಕ್ಕೂ ಹೆಚ್ಚು ಪೊಲೀಸರು ಗ್ರಾಮದಲ್ಲಿ ಠಿಕಾಣೆ ಹೂಡಿದ್ದಾರೆ.
ಶವಗಳನ್ನು ಇಲ್ಲಿನ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತರ ಸಂಬಂಧಿಕರು, ಸ್ನೇಹಿತರು ಆಸ್ಪತ್ರೆ ಮುಂದೆ ಸೇರಿದ್ದಾರೆ.
ಕೊಲೆಯ ನಿಖರ ಕಾರಣ ಹಾಗೂ ಆರೋಪಿಗಳ ಗುಂಪಿನ ಬಗ್ಗೆ ಶುಕ್ರವಾರ ಬೆಳಿಗ್ಗೆ ಕೂಡ ಯಾವುದೇ ಸುಳಿವು ಸಿಕ್ಕಿಲ್ಲ. ಹಳೇ ದ್ವೇಷದ ಹಿನ್ನೆಲೆ ಎಂದು ಮೃತರ ಕುಟುಂಬದವರು ಹೇಳಿದ್ದರೂ ಅದರಲ್ಲಿ ಸ್ಪಷ್ಟತೆ ಇಲ್ಲ ಎಂದು ಮಾರಿಹಾಳ ಪೊಲೀಸರು ಪ್ರತಿಕ್ರಿಯಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.