ಹಣಕಾಸು ನಿರ್ವಹಣೆಯ ಹೊಣೆಗಾರಿಕೆಯಿಂದ ಗ್ರಾಮಪಂಚಾಯಿತಿ ಅಧ್ಯಕ್ಷರನ್ನು ಹೊರಗಿಡಲು ಸರ್ಕಾರ ನಿರ್ಧರಿಸಿ, ಪಂಚಾಯ್ತಿಯ ವ್ಯವಹಾರದ ಎಲ್ಲಾ ಚೆಕ್’ಗಳಿಗೂ ಸಹಿ ಮಾಡುವ ಅಧಿಕಾರವನ್ನು ಪಿಡಿಒ ಹಾಗೂ ದ್ವಿತೀಯ ದರ್ಜಿ ಲೆಕ್ಕ ಸಹಾಯಕರಿಗೆ (ಎಸ್’ಡಿಎ) ನೀಡಲಾಗಿದೆ.
ಈ ಸಂಬಂಧ ಸರ್ಕಾರ ಆದೇಶ ಹೊರಡಿಸಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣಗಳಿಗೆ ತಿದ್ದುಪಡಿ ಮತ್ತು ಗ್ರಾಮ ಪಂಚಾಯಿತಿ ನೌಕರರ ಸೇವಾ ವಿಷಯಗಳ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ನಡಾವಳಿಗಳನ್ನು ರೂಪಿಸಿದೆ.
ಉದ್ಯೋಗ ಖಾತ್ರಿ ವಿವಿಧ ವಸತಿ ಯೋಜನೆಗಳ ಅನುಷ್ಟಾನ, ಹಣಕಾಸಿನ ನಿಧಿ, ಪಂಚಾಯಿತಿ ತೆರಿಗೆ, ಖರ್ಚು –ವೆಚ್ಚಗಳ ಎಲ್ಲಾ ಚೆಕ್’ಗಳಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ( ಹಿಂದೆ ಕಾರ್ಯದರ್ಶಿ) ಹಾಗೂ ಅಧ್ಯಕ್ಷರ ಜಂಟಿ ಸಹಿ ಕಡ್ಡಾಯವಾಗಿತ್ತು.
ಈ ಸರ್ಕಾರ 2006ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ, ಅಧ್ಯಕ್ಷರ ಸಹಿ ಅಧಿಕಾರ ಹಿಂಪಡೆಯಲು ಹೊಸದಾಗಿ ನಡಾವಳಿ ರೂಪಿಸಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ನೀಡಲಾಗಿದ್ದ ಸಹಿ ಅಧಿಕಾರವನ್ನು ಹಿಂಪಡೆಯಲು ಸರ್ಕಾರ ಪ್ರಮುಖವಾಗಿ ಎರಡು ಕಾರಣಗಳನ್ನು ನೀಡಿದೆ. ಯೋಜನೆಗಳು, ಕಾರ್ಯಕ್ರಮಗಳ ಬಿಲ್ ಪಾವತಿ ಮಾಡಲು ಲಂಚ ಪಡೆಯುವಾಗ ರಾಜ್ಯದ ಹಲವು ಗ್ರಾಮ ಪಂಚಾಯಿತಿ ಅಧ್ಯಕ್ಷರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಹಲವು ಪ್ರಕರಣಗಳಲ್ಲಿ ವಿಳಂಬವಾಗಿ ಬಿಲ್ ಪಾವತಿ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ.
ಅಧ್ಯಕ್ಷರು ಚುನಾಯಿತ ಪ್ರತಿನಿಧಿಯಾಗಿದೆ ಹಣಕಾಸಿನ ವ್ಯವಹಾರಗಳಿಗೆ ಹೊಣೆಗಾರರಲ್ಲದ ಕಾರಣ ಸರ್ಕಾರಿ ನೌಕರರಾದ ಪಿಡಿಒ, ಎಸ್’ಡಿಎಎ ನಿರ್ವಹಿಸಬೇಕು.
ಒಂದೇ ವೇಳೆ ಪಂಚಾಯಿತಿಗಳಲ್ಲಿ ಎಸ್’ಡಿಎಎ ಸ್ಥಾನ ಖಾಲಿ ಇದ್ದರೆ, ಪಿಡಿಒ ಜೊತೆಗೆ ಕಾರ್ಯದರ್ಶಿ ಜಂಟಿ ಸಹ ಮಾಡಬೇಕು ಎಂದು ಸೂಚಿಸಲಾಗಿದೆ.
ತೆರಿಗೆ ನಿರ್ಧಾರ ಹೊಣೆಗಾರಿಕೆಯೂ ಮೊಟಕು
ಇದುವರೆಗೂ ಗ್ರಾಮ ಪಂಚಾಯಿತಿ ನಿರ್ಣಯ ತೆಗೆದುಕೊಂಡ ನಂತರ, ಪಂಚಾಯಿತಿ ನಿರ್ಣಯ ಸಂಖ್ಯೆ ದಿನಾಂಕ ನಮೂದಿಸಿ ಇ –ಸ್ವತ್ತು ತಂತ್ರಾಂಶದ ಮೂಲಕ ತೆರಿಗೆ ನಿರ್ಧಾರ ಪಟ್ಟಿಗಳನ್ನು ವಿತರಿಸಲಾಗುತ್ತಿತ್ತು. ಪಂಚಾಯಿತಿ ಸಭೆಗಳು ಕಾಲಕಾಲಕ್ಕೆ ನಡೆಯದ ಕಾರಣ, ನಮೂನೆ ವಿತರಿಸುವ ಸಂಪೂರ್ಣ ಅಧಿಕಾರವನ್ನು ಪಿಡಿಒಗಳಿಗೆ ನೀಡಲಾಗಿದೆ. ರಾಜ್ಯದಲ್ಲಿ 5963 ಗ್ರಾಮ ಪಂಚಾಯಿತಿಗಳಿದ್ದು, 91437 ಗ್ರಾಮ ಪಂಚಾಯಿತಿ ಸದಸ್ಯರು ಇದ್ದಾರೆ.
ಸದಸ್ಯರ ಅಧಿಕಾರವು ಮೊಟಕು
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗೃಹ, ವಾಣಿಜ್ಯ ಕಟ್ಟಡ ಕಾಮಗಾರಿಗಳು, ಕೈಗಾರಿಕೆ, ಗಣಿಗಾರಿಕೆ, ಅಂಗಡಿ ಹೋಟೆಲ್ ಮತ್ತಿತರ ವಾಣಿಜ್ಯ ವಹಿವಾಡುಗಳ ಆರಂಭಕ್ಕೆ ಪರವಾನಗಿ, ಇ-ಸ್ವತ್ತು (ನಮೂನೆ-9,11ಎ, 11ಬಿ) ನೀಡುವ ಕುರಿತು ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತಿತ್ತು. ಪಂಚಾಯತ್ ರಾಜ್ ಕಾಯ್ದೆಯ 64 ರಿಂದ 70ರವರೆಗಿನ ನಿಯಮಗಳಿಗೆ ತಿದ್ದುಪಡಿ ತಂದು ಪರವಾನಗಿ ನೀಡುವ ಅಧಿಕಾರವನ್ನು ಪಿಡಿಒಗಳಿಗೆ ನೀಡಲಾಗಿದೆ. ನೀಡಿದ ನಂತರ ಸಭೆಯ ಗಮನಕ್ಕೆ ತರಲೂ ಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ಸಭೆಗಳು ಸಕಾಲದಲ್ಲಿ ನಡೆಯದ ಕಾರಣ ವಿಳಂಬ ತಪ್ಪಿಸಲು ಇಂತಹ ಕ್ರಮ ಅನಿವಾರ್ಯ ಎಂದು ವಿವರಿಸಲಾಗಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.