ಮನೆ ರಾಜಕೀಯ ಎಸ್’ಸಿ, ಎಸ್’ಟಿ ಮೀಸಲಾತಿ ಹೆಚ್ಚಿಸುವ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷ ಸಭೆ

ಎಸ್’ಸಿ, ಎಸ್’ಟಿ ಮೀಸಲಾತಿ ಹೆಚ್ಚಿಸುವ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷ ಸಭೆ

0

ಬೆಂಗಳೂರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಿಸಲು ರಚಿಸಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ನೀಡಿರುವ ವರದಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆ ಜರುಗಿತು.

ಕಾನೂನು ಸಚಿವ ಮಧುಸ್ವಾಮಿ ಮಾತನಾಡಿ, ಆ ಸಮುದಾಯಗಳಿಗೂ ಶೈಕ್ಷಣಿಕ ಉದ್ದೇಶಕ್ಕೆ ಹೆಚ್ಚು ಹಣ ಮೀಸಲಿಡುವಂತೆ ಹೇಳಿದ್ದಾರೆ. ಅದನ್ನು ಸರ್ಕಾರ ಒಪ್ಪಿದೆ. ಮೀಸಲಾತಿ ಶೇಕಡಾ 50 ಮೀರಬಾರದು ಎಂದು ಸುಪ್ರೀಂ ಕೋರ್ಟ್ ತೀರ್ಪು ಇದೆ.‌ ಆದರೆ ತಮಿಳುನಾಡಿನಲ್ಲಿ ಇದಕ್ಕೆ ಅವಕಾಶ ಕೊಟ್ಟಿದ್ದಾರೆ.‌ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬೇಕಾಗುತ್ತದೆ. ಇತರೆ ಸಮುದಾಯಗಳ ಮೀಸಲಾತಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಮಾಹಿತಿ ನೀಡಿದರು.

ಮೀಸಲಾತಿ ಹೆಚ್ಚಳ ಕುರಿತು ಸಿಎಂ ಹಾಗೂ ಇತರ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಸಭೆಗೂ ಮುನ್ನ ಮಾತನಾಡಿದ ಕಾಂಗ್ರೆಸ್ ಉಪ ನಾಯಕ ಯು.ಟಿ.ಖಾದರ್ ಅವರು, ಎಸ್​​ಸಿ ಎಸ್​​ಟಿ ಮೀಸಲಾತಿ ಹೆಚ್ಚಿಸಲು ಬಿಜೆಪಿ ಸರ್ಕಾರಕ್ಕೆ ಮನಸ್ಸಿಲ್ಲ. ನಿವೃತ್ತ ನ್ಯಾ.ನಾಗಮೋಹನ್ ದಾಸ್ ಕಮಿಟಿ ರಚನೆಯಾಗಿದ್ದು, ನಮ್ಮ ಸರ್ಕಾರದಲ್ಲಿ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ನಾಗಮೋಹನ್ ದಾಸ್ ಕಮಿಟಿ ರಚನೆಯಾಯಿತು. ಆದರೆ, ಇದುವರೆಗೂ ಮೀಸಲಾತಿ ಹೆಚ್ಚಳ ಮಾಡಲು ಬಿಜೆಪಿ ಸರ್ಕಾರ ಮನಸ್ಸು ಮಾಡಲಿಲ್ಲ ಎಂದು ಹೇಳಿದರು.

ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆ.ಡಿ.ಎಸ್. ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಚಿವರಾದ ಆರ್.ಅಶೋಕ್, ಜೆ.ಸಿ.ಮಾಧುಸ್ವಾಮಿ, ಗೋವಿಂದ ಕಾರಜೋಳ, ಬಿ.ಶ್ರೀ ರಾಮುಲು, ಆನಂದ್ ಸಿಂಗ್, ಕೋಟ ಶ್ರೀನಿವಾಸ ಪೂಜಾರಿ, ಎಸ್.ಅಂಗಾರ, ಶಾಸಕರಾದ ಯು.ಟಿ. ಖಾದರ್, .ಜೆ.ಡಿ.ಎಸ್.ಶಾಸಕಾಂಗ ಪಕ್ಷದ ನಾಯಕ ಭೋಜೇಗೌಡ, ಅಜಯ್ ಧರ್ಮ ಸಿಂಗ್, ಮಾಜಿ ಶಾಸಕ ವಿ.ಎಸ್. ಉಗ್ರಪ್ಪ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.