ಮಂಡ್ಯ(Mandya): ಭಾರತ್ ಜೋಡೊ ಯಾತ್ರೆಯ ಅಂಗವಾಗಿ ರಾಹುಲ್ಗಾಂಧಿ ಶುಕ್ರವಾರ ನಾಗಮಂಗಲ ತಾಲ್ಲೂಕು ಅಂಚೆಬೂವನಹಳ್ಳಿ ಗ್ರಾಮದ ಬಳಿ ‘ಶೈಕ್ಷಣಿಕ ಸಂವಾದ’ ನಡೆಸಿದರು. ಸಂವಾದದಲ್ಲಿ ಶಾಲಾ, ಕಾಲೇಜುಗಳ ಅಧ್ಯಾಪಕರು, ಶೈಕ್ಷಣಿಕ ತಜ್ಞರು, ವಿವಿಧ ಸಂಘಟನೆಗಳ ಮುಖಂಡರು ಭಾಗಿಯಾಗಿದ್ದರು.
ಸಂವಾದ ಕುರಿತಂತೆ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯಸಭೆ ಮಾಜಿ ಸದಸ್ಯ ಪ್ರೊ.ರಾಜೀವ್ಗೌಡ, ಹೊಸ ಶಿಕ್ಷಣ ನೀತಿಯಿಂದಾಗಿ ಕಳೆದ 75 ವರ್ಷಗಳಿಂದ ಕಟ್ಟಿದ್ದ ಶೈಕ್ಷಣಿಕ ಅಡಿಪಾಯಕ್ಕೆ ಧಕ್ಕೆಯಾಗಿದೆ. ಶಿಕ್ಷಣದಲ್ಲಿ ಕೋಮುವಾದ, ಕೇಂದ್ರೀಕರಣ ಹಾಗೂ ವಾಣಿಜ್ಯೀಕರಣದಿಂದ (3ಸಿ– ಕಮ್ಯೂನಲೈಸೇಷನ್, ಸೆಂಟ್ರಲೈಸೇಷನ್, ಕಮರ್ಷಿಯಲೈಸೇಷನ್) ದೇಶದಲ್ಲಿ ಶೈಕ್ಷಣಿಕ ತುರ್ತುಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿದೆ ಎಂದು ರಾಷ್ಟ್ರೀಯ ಕಾನೂನು ಶಾಲೆಯ ಪ್ರಾಧ್ಯಾಪಕರೊಬ್ಬರು ಆತಂಕ ವ್ಯಕ್ತಪಡಿಸಿದರು ಎಂದು ತಿಳಿಸಿದರು.
ಪಠ್ಯಪುಸ್ತಕವನ್ನು ಕೇಸರೀಕರಣಗೊಳಿಸುವ ಮೂಲಕ ಮಕ್ಕಳ ಮನಸ್ಸಿನ ಮೇಲೆ ವಿಷ ಬೀಜ ಬಿತ್ತಲಾಗುತ್ತಿದೆ. ಕರ್ನಾಟಕದಲ್ಲಿ ನಡೆದ ಪಠ್ಯಪುಸ್ತಕ ಪರಿಷ್ಕರಣೆ ವೇಳೆ ಹೊಸ ಪುರಾಣವನ್ನೇ ಸೃಷ್ಟಿಸಲಾಗಿದೆ. ಸಾವರ್ಕರ್ ಅವರು ಬುಲ್ಬುಲ್ ಹಕ್ಕಿಯ ಮೇಲೆ ಕುಳಿತು ತಾಯ್ನಾಡಿಗೆ ಬರುತ್ತಿದ್ದರು ಎಂದೆಲ್ಲಾ ಬರೆಯಲಾಗಿದೆ ಎಂಬ ವಿಚಾರ ಚರ್ಚೆಗೆ ಬಂದವು. ಇದನ್ನು ಕೇಳಿ ರಾಹುಲ್ ಗಾಂಧಿ ಆಶ್ಚರ್ಯ ವ್ಯಕ್ತಪಡಿಸಿದರು ಎಂದರು.
ಶಿಕ್ಷಕಿ ಪೂರ್ಣಿಮಾ ಅವರು ಸರ್ಕಾರಿ ಶಾಲೆಗಳ ಸ್ಥಿತಿಯ ಬಗ್ಗೆ ಗಮನ ಸೆಳೆದರು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಸಮರ್ಪಕ ಸೌಲಭ್ಯಗಳು ಸಿಗದ ಪರಿಣಾಮ ಎಲ್ಲರೂ ಖಾಸಗಿ ಶಾಲೆಗಳತ್ತ ಮುಖ ಮಾಡಿದ್ದಾರೆ. ಬಡವರು ಕೂಡ ಹೆಚ್ಚೆಚ್ಚು ಶುಲ್ಕ ಪಾವತಿಸಿ ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವುದು ಯಾವಾಗ ಎಂಬ ಪ್ರಶ್ನೆ ಬಂತು ಎಂದರು.
ರಾಹುಲ್ ಗಾಂಧಿ ಉತ್ತರಿಸಿ, ಜಿಡಿಪಿಯಲ್ಲಿ ಶೇ 6ರಷ್ಟು ಹಣವನ್ನು ಶಿಕ್ಷಣ ಹಾಗೂ ಆರೋಗ್ಯಕ್ಕೆ ಮೀಸಲಿಡುವುದಾಗಿ ಸರ್ಕಾರಗಳು ಭರವಸೆ ನೀಡುತ್ತವೆ. ಆದರೆ ವಾಸ್ತವವಾಗಿ ಅನುದಾನ ನೀಡುವುದಿಲ್ಲ. ಸರ್ಕಾರ ಮನಸ್ಸು ಮಾಡಿದರೆ ಸರ್ಕಾರಿ ಶಾಲೆಗಳನ್ನು ಬಹಳ ಚೆನ್ನಾಗಿ ನಡೆಸಬಹುದು. ಕೇಂದ್ರೀಯ ವಿದ್ಯಾಲಯ, ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ), ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಐಐಎಂಎಸ್) ಇವು ಚೆನ್ನಾಗಿಯೇ ನಡೆಯುತ್ತಿವೆ ಎಂದು ಉತ್ತರಿಸಿದರು ಎಂದರು.
ಮುಂದಿನ ಯಾವುದೇ ಚುನಾವಣೆ ಬಂದರೂ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಶಿಕ್ಷಣಕ್ಕೆ ಪ್ರಮುಖ ಆದ್ಯತೆ ನೀಡಲಿದೆ. ಇದು ಪಕ್ಷದ ಪ್ರಣಾಳಿಕೆಯಾಗುವ ಬದಲು ಜನರ ಅಭಿಪ್ರಾಯ ಆಗಿರಲಿದೆ. ಆಯಾ ಕ್ಷೇತ್ರಗಳ ತಜ್ಞರನ್ನು ಸಂಪರ್ಕಿಸಿ ಅವರ ಸಲಹೆ ಸೂಚನೆ ಪಡೆದು ಪ್ರಣಾಳಿಕೆ ಸಿದ್ಧಪಡಿಸಲಾಗುವುದು ಎಂದು ರಾಹುಲ್ ಗಾಂಧಿ ಭರವಸೆ ನೀಡಿದರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಇದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.