ಸುಪ್ರೀಂ ಕೋರ್ಟ್’ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಡಿ ವೈ ಚಂದ್ರಚೂಡ್ ಅವರ ಹೆಸರನ್ನು ಸಿಜೆಐ ಉದಯ್ ಉಮೇಶ್ ಲಲಿತ್ ಅವರು ಇಂದು ಅಧಿಕೃತವಾಗಿ ಶಿಫಾರಸ್ಸು ಮಾಡಿದ್ದಾರೆ.
ಸಿಜೆಐ ಲಲಿತ್ ಅವರು ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಎರಡು ವರ್ಷಗಳ ಸುದೀರ್ಘ ಅಧಿಕಾರಾವಧಿ ಹೊಂದಿರುವ ನ್ಯಾ. ಚಂದ್ರಚೂಡ್ ಅವರ ಹೆಸರನ್ನು ಸಿಜೆಐ ಪದವಿಗೆ ಸೂಚಿಸಿದ್ದಾರೆ.
ಇದಕ್ಕೂ ಮುನ್ನ ಚಂದ್ರಚೂಡ್ ಅವರನ್ನು ಸುಪ್ರೀಂ ಕೋರ್ಟ್ನ 50ನೇ ಸಿಜೆಐ ಆಗಿ ಶಿಫಾರಸ್ಸು ಮಾಡಿರುವ ಪತ್ರವನ್ನು ಹಸ್ತಾಂತರಿಸುವ ವೇಳೆ ನ್ಯಾಯಮೂರ್ತಿಗಳ ಲಾಂಜ್ನಲ್ಲಿ ಸಭೆ ಸೇರುವಂತೆ ಸರ್ವೋಚ್ಚ ನ್ಯಾಯಾಲಯದ ಎಲ್ಲ ನ್ಯಾಯಮೂರ್ತಿಗಳಿಗೆ ಹಾಲಿ ಸಿಜೆಐ ಯು ಯು ಲಲಿತ್ ಮನವಿ ಮಾಡಿದ್ದರು. ತಮ್ಮ ಉತ್ತರಾಧಿಕಾರಿಯ ಹೆಸರು ಶಿಫಾರಸು ಮಾಡುವಂತೆ ಅಕ್ಟೋಬರ್ 7ರಂದು ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು ಅವರು ಸಿಜೆಐ ಕಚೇರಿಗೆ ಪತ್ರ ಬರೆದಿದ್ದರು.
ಸಿಜೆಐ ಲಲಿತ್ ಅವರು ನವೆಂಬರ್ 8 ರಂದು ಅಧಿಕಾರ ತ್ಯಜಿಸಲಿದ್ದಾರೆ. ಅಂದು ಸಾರ್ವಜನಿಕ ರಜೆ (ಗುರುನಾನಕ್ ಜಯಂತಿ) ಇರುವುದರಿಂದ ನವೆಂಬರ್ 7 ಅವರ ಕರ್ತವ್ಯದ ಕೊನೆಯ ದಿನವಾಗಲಿದೆ. ಈ ವರ್ಷದ ಆಗಸ್ಟ್ 27 ರಂದು ಮಾಜಿ ಸಿಜೆಐ ಎನ್ ವಿ ರಮಣ ಅವರು ನಿವೃತ್ತರಾದ ನಂತರ ನ್ಯಾ. ಲಲಿತ್ ಅವರು ಅಲ್ಪ ಅವಧಿಗೆ ಸಿಜೆಐ ಆಗಿ ಕಾರ್ಯಭಾರ ವಹಿಸಿಕೊಂಡರು
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.