ಮನೆ ರಾಜಕೀಯ ಮೀಸಲಾತಿ ಹೆಚ್ಚಳ:  ಮೊಸರಲ್ಲಿ ಕಲ್ಲು ಹುಡುಕುತ್ತಿರುವ ಕಾಂಗ್ರೆಸ್ – ಬಿಜೆಪಿ ವಾಗ್ದಾಳಿ

ಮೀಸಲಾತಿ ಹೆಚ್ಚಳ:  ಮೊಸರಲ್ಲಿ ಕಲ್ಲು ಹುಡುಕುತ್ತಿರುವ ಕಾಂಗ್ರೆಸ್ – ಬಿಜೆಪಿ ವಾಗ್ದಾಳಿ

0

ಬೆಂಗಳೂರು(Bengaluru): ಅಧಿಕಾರದಲ್ಲಿದ್ದಾಗ ಪರಿಶಿಷ್ಟ ವರ್ಗದವರ ನ್ಯಾಯಯುತ ಬೇಡಿಕೆಯನ್ನು ತಿರಸ್ಕರಿಸಿದ ಕಾಂಗ್ರೆಸ್‌ ಇಂದು ಮೊಸರಲ್ಲಿ ಕಲ್ಲು ಹುಡುಕುತ್ತಿರುವುದೇಕೆ ? ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಮೀಸಲಾತಿ ಹೆಚ್ಚಳ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್‌ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಸರ್ಕಾರ ಮೀಸಲಾತಿ ನಿರ್ಧಾರ ಕೈಗೊಂಡ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅನುಮಾನದ ಭೂತ ಹುಟ್ಟಿಕೊಂಡಿದೆ. ಸರ್ವಪಕ್ಷ ಸಭೆ ಕರೆದು ಮೀಸಲಾತಿ ಹೆಚ್ಚಳ ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಗಳನ್ನು ತಿಳಿಯ ಪಡಿಸಲಾಗಿದೆ. ಆದರೂ ಈಗ ಕಾಂಗ್ರೆಸ್ ತಕರಾರು ಎತ್ತುತ್ತಿದೆ ಎಂದು ವಾಗ್ದಾಳಿ ನಡೆಸಿದೆ.

ಪರಿಶಿಷ್ಟ ವರ್ಗದ ಮೀಸಲಾತಿ ಏರಿಕೆ ಮಾಡಿರುವುದು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಪಕ್ಷವನ್ನು ನಿದ್ದೆಗೆಡುವಂತೆ ಮಾಡಿದೆ. ಮೀಸಲಾತಿ ಏರಿಸುವಂತೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದರೂ ಗಣನೆಗೆ ತೆಗೆದುಕೊಂಡಿಲ್ಲವೆಂದು ಸ್ವಾಮೀಜಿಗಳು ಹೇಳಿದ್ದಾರೆ. ಕಾಂಗ್ರೆಸ್ ಮೀಸಲಾತಿಗೆ ವಿರೋಧಿಸಿದ್ದೇಕೆ ಎಂದು ಬಿಜೆಪಿ ಪ್ರಶ್ನಿಸಿದೆ.

ಸಾಂವಿಧಾನಿಕ ಬಿಕ್ಕಟ್ಟುಗಳನ್ನು ಎದುರಿಸಲು ಮತ್ತು ನಿವಾರಿಸಲು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಸರ್ವ ಸನ್ನದ್ಧವಾಗಿದೆ. ನ್ಯಾಯ ಮಾರ್ಗದಲ್ಲೇ ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಕೊಡಿಸುತ್ತೇವೆ ಎಂದು ಹೇಳಿದೆ.