ಮನೆ ರಾಜಕೀಯ ಭತ್ತ ತೂರುವ ಮೂಲಕ ಬಿಜೆಪಿ ಜನಸಂಕಲ್ಪ ಯಾತ್ರೆ ಉದ್ಘಾಟನೆ

ಭತ್ತ ತೂರುವ ಮೂಲಕ ಬಿಜೆಪಿ ಜನಸಂಕಲ್ಪ ಯಾತ್ರೆ ಉದ್ಘಾಟನೆ

0

ರಾಯಚೂರು(Raichuru): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭತ್ತ ತೂರುವ ಮೂಲಕ ಬಿಜೆಪಿ ಪ್ರಚಾರ ಜನಸಂಕಲ್ಪ ಯಾತ್ರೆಯನ್ನು ಮಂಗಳವಾರ ತಾಲ್ಲೂಕಿನ ಗಿಲ್ಲೇಸುಗೂರು ಗ್ರಾಮದಲ್ಲಿ ಉದ್ಘಾಟಿಸಿದರು.

ಆರಂಭದಲ್ಲಿ ಮಾತನಾಡಿದ ಶಾಸಕ ಕೆ.ಶಿವನಗೌಡ ನಾಯಕ, ರಾಯಚೂರು ಜಿಲ್ಲೆಯ ಏಳು ಸ್ಥಾನಗಳ ಪೈಕಿ ಐದು ಸ್ಥಾನಗಳನ್ನು ಗೆದ್ದೆ ಗೆಲ್ಲುತ್ತೇವೆ. ಆದರೆ, ಜಿಲ್ಲೆಗೆ ಏಮ್ಸ್ ಮಂಜೂರಿಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜನರೆಲ್ಲ ನಮ್ಮ ಮನೆ ಮುಂದೆ ಕುಳಿತುಕೊಳ್ಳುತ್ತಾರೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಹೇಗಾದರೂ ಮಾಡಿ ನನ್ನ ಶಾಸಕ ಸ್ಥಾನ ಉಳಿಸಿ ಎಂದು ಮನವಿ ಮಾಡಿದರು.ಸ

ಚಿವರಾದ ಶ್ರೀರಾಮುಲು, ಗೋವಿಂದ ಕಾರಜೋಳ, ಶಂಕರ ಪಾಟೀಲ ಮುನೇನಕೊಪ್ಪ, ಸಂಸದರಾದ ಕರಡಿ ಸಂಗಣ್ಣ, ರಾಜಾ ಅಮರೇಶ್ವರ ನಾಯಕ ಮತ್ತಿತರರು ಭಾಗವಹಿಸಿದ್ದಾರೆ.