ಮನೆ ರಾಜಕೀಯ ಬಿಎಸ್ ವೈ ಅವರು ರಾಜ್ಯದ ಜನರ ಹೃದಯ ಸಿಂಹಾಸನದಲ್ಲಿದ್ದಾರೆ: ಸಿಎಂ ಬೊಮ್ಮಾಯಿ

ಬಿಎಸ್ ವೈ ಅವರು ರಾಜ್ಯದ ಜನರ ಹೃದಯ ಸಿಂಹಾಸನದಲ್ಲಿದ್ದಾರೆ: ಸಿಎಂ ಬೊಮ್ಮಾಯಿ

0

ಹೊಸಪೇಟೆ(Hospete): ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಜನರ ಹೃದಯ ಸಿಂಹಾಸನದಲ್ಲಿದ್ದಾರೆ ಎಂದು ಮಾಜಿ ಸಿಎಂ ಸಿದ‍್ಧರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡುಗಿದರು.

ಯಡಿಯೂರಪ್ಪಗೆ ಅರಳು ಮರಳು ಎಂದು ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಯಾವತ್ತೂ ಜಗ್ಗಲ್ಲ ಕುಗ್ಗಲ್ಲ. ಯಡಿಯೂರಪ್ಪ ಯಾವತ್ತೂ ಅರಳು ಅವರು ಮರಳಲ್ಲ. ಬಿಎಸ್ ವೈ ಈಗಲೂ ರಾಜ್ಯದ ಜನರ ಮನದಲ್ಲಿದ್ದಾರೆ. ಸಿದ್ದರಾಮಯ್ಯರ ಹೇಳಿಕೆ ನೋಡಿದ್ರೆ ಅವರಿಗೆ ಅರಳು ಮರಳು ಆದಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು.

ಸಿದ್ಧರಾಮಯ್ಯ ಯಾವಾಗಲೂ ವಿತಂಡವಾದ ಮಾಡುತ್ತಾರೆ. ಪ್ರಧಾನಿ ಮೋದಿ ಅವರು ನೆಹರು ಪಾದ ಧೂಳಿಗೆ ಸಮ ಅಂತಾ ಹೇಳಿದ್ದಾರೆ. ಮಹಾತ್ಮಗಾಂಧಿ ಪಾದದ ಧೂಳಿಗೂ ನೆಹರು ಸಮರಲ್ಲ. ಪ್ರಧಾನಿ ಮೋದಿ ಬಗ್ಗೆ ಹಗುರವಾಗಿ ಮಾತನಾಡಬೇಡಿ. ಮೋದಿ ಅವರು ದೇಶ ಕಟ್ಟುವ ಕೆಲಸ ಮಾಡುತ್ತಿದ್ದಾರೆ  ಎಂದು  ತಿರುಗೇಟು ನೀಡಿದರು.