ವಿಜಯನಗರ(Vijayanagara): ಕಾಂಗ್ರೆಸ್’’ನವರು ಕರ್ನಾಟಕ ಐದು ವರ್ಷ ಕಪ್ಪ ಕಾಣಿಕೆ ಕೊಡುವ ಎಟಿಎಂ ಆಗಿತ್ತು. ಯಾವುದೇ ರಾಜ್ಯದ ಚುನಾವಣೆ ಇದ್ದರೂ ಕರ್ನಾಟಕದಿಂದ ಹಣ ಕೊಡುತ್ತಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಹೂವಿನಹಡಗಲಿಯಲ್ಲಿ ಜಿ.ಬಿ.ಆರ್. ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಕಪ್ಪ ಕಾಣಿಕೆ ಕೊಡುತ್ತಾರೆಂದು ಕಾಂಗ್ರೆಸ್ ಹೇಳುತ್ತದೆ. ಆದರೆ, ಕಾಂಗ್ರೆಸ್ಸಿಗೆ ಕಪ್ಪ ಕಾಣಿಕೆ ಕೊಟ್ಟು ಅಭ್ಯಾಸವಾಗಿದೆ. ಕಪ್ಪು ಕಾಣಿಕೆ ಕೊಡುವ ಸಂಪ್ರದಾಯ, ಇತಿಹಾಸ ಕಾಂಗ್ರೆಸ್ ಗೆ ಇದೆ ಎಂದು ವಾಗ್ದಾಳಿ ನಡೆಸಿದರು.
ಹಡಗಲಿಯ ಸಿಂಗಟಲೂರು ಏತನೀರಾವರಿ ಯೋಜನೆ ಅನುಷ್ಠಾನ ಮಾಡಿದ್ದೇವೆ. ರಾಜ್ಯಗಳ ತಾಂಡಾ ಅಭಿವೃದ್ಧಿ ನಿಗಮ ಮಾಡಿದ್ದು ಯಡಿಯೂರಪ್ಪ ಸರ್ಕಾರ, ತಾಂಡಾ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ಕೊಟ್ಟಿದ್ದೇವೆ. ಪ್ರಗತಿ ನಿರಂತರವಾಗಿ ನಡೆಯಬೇಕು ಎಂದು ಜನಾಂಗದ ಜನರಿಗೆ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಅಧಿಕಾರವಿದ್ದಾಗ ಕಾಂಗ್ರೆಸ್ ಏನು ಮಾಡಿದೆ. ಮೂಗಿಗೆ ತುಪ್ಪ ಹಚ್ಚೋ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಬಳ್ಳಾರಿ ಸೋನಿಯಾ ಗಾಂಧಿಗೆ ಆಶೀರ್ವಾದ ಮಾಡಿತ್ತು. ಬಳ್ಳಾರಿ ಸ್ಥಾನ ಉಳಿಸಿಕೊಳ್ಳಬೇಕೆಂದು ಈ ಭಾಗದ ಜನರ ನಿರೀಕ್ಷೆ ಇತ್ತು. ಚುನಾವಣೆಯಲ್ಲಿ ಬಳ್ಳಾರಿ ತವರು ಮನೆ ಅಂದರು. ಆದರೆ ಕೈಕೊಟ್ಟು ರಾಜೀನಾಮೆ ನೀಡಿ ಉತ್ತರ ಪ್ರದೇಶಕ್ಕೆ ಹೋದರು. ಮೂರು ಸಾವಿರ ಕೋಟಿ ಪ್ಯಾಕೇಜ್ ಕೊಡುತ್ತೇನೆ ಅಂದರು. ಏನಾಯ್ತು? ಸುಳ್ಳು ಆಶ್ವಾಸನೆ ಕೊಟ್ಟವರು ಈಗ ಮತ್ತೆ ಬರುತ್ತಿದ್ದಾರೆ. ಅಮ್ಮ ಅಯ್ತು ಇದೀಗ ಮಗ ಮತ್ತೊಂದು ಸುಳ್ಳು ಹೇಳೋಕೆ ಬರುತ್ತಿದ್ದಾರೆ ಎಂದು ಟೀಕಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.