ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆ ವೇಳೆ ಪತ್ತೆಯಾದ ವಸ್ತು ಶಿವಲಿಂಗವೇ ಅಥವಾ ನೀರಿನ ಕಾರಂಜಿಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ವೈಜ್ಞಾನಿಕ ವಿಶ್ಲೇಷಣೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ನಿರ್ದೇಶನ ನೀಡುವಂತೆ ಕೋರಿ 4 ಮಂದಿ ಹಿಂದೂ ಪಕ್ಷಕಾರರು ಸಲ್ಲಿಸಿದ್ದ ಮನವಿಯನ್ನು ವಾರಾಣಸಿ ನ್ಯಾಯಾಲಯ ಶುಕ್ರವಾರ ತಿರಸ್ಕರಿಸಿದೆ .
[ಶ್ರೀಮತಿ. ರಾಖಿ ಸಿಂಗ್ ಮತ್ತಿತರರು ಹಾಗೂ ಉತ್ತರ ಪ್ರದೇಶ ಸರ್ಕಾರ ನಡುವಣ ಪ್ರಕರಣ].
ಜಿಲ್ಲಾ ನ್ಯಾಯಾಧೀಶ ಡಾ. ಎ ಕೆ ವಿಶ್ವೇಶ ಅವರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಸ್ಥಳಕ್ಕೆ ಯಾರೂ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ವೈಜ್ಞಾನಿಕ ವಿಶ್ಲೇಷಣೆಗೆ ಅವಕಾಶ ನೀಡುವಂತಿಲ್ಲ ಎಂದು ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಜ್ಞಾನವಾಪಿ ಮಸೀದಿ ನಿರ್ವಹಣೆಯ ಹೊಣೆ ಹೊತ್ತಿರುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು ಹಿಂದೂ ಆರಾಧಕರು ಸಲ್ಲಿಸಿದ್ದ ಮನವಿಗೆ ಆಕ್ಷೇಪ ವ್ಯಕ್ತಪಡಿಸಿತ್ತು.
ಅಡ್ವೊಕೇಟ್ ಕಮಿಷನರ್ ಸಮೀಕ್ಷೆ ವೇಳೆ ಸ್ಥಳದಲ್ಲಿ ಪತ್ತೆಯಾದ ವಸ್ತುವು ಶಿವಲಿಂಗವಾಗಿದ್ದು, ಅನಾದಿ ಕಾಲದಿಂದಲೂ ವಿವಾದಿತ ಸ್ಥಳದಲ್ಲಿ ಅದು ಅಸ್ತಿತ್ವದಲ್ಲಿದೆ. ಈ ಹಿನ್ನೆಲೆಯಲ್ಲಿ ಆ ವಸ್ತುವಿನ ಸ್ವರೂಪ ಮತ್ತು ಅದು ರೂಪುಗೊಂಡ ಕಾಲವನ್ನು ಪತ್ತೆ ಹಚ್ಚುವಂತೆ ಎಎಸ್ಐಗೆ ನಿರ್ದೇಶಿಸುವ ಅಗತ್ಯವಿದೆ ಎಂದು ಹಿಂದೂ ಪಕ್ಷಕಾರರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಮುಸ್ಲಿಂ ಪರ ವಕೀಲ ಮುಮ್ತಾಜ್ ಅಹ್ಮದ್ ಅವರು ‘ಯಾವುದೇ ವಸ್ತುವಿನ ಕಾರ್ಬನ್ ಡೇಟಿಂಗ್ ಮಾಡಲು ಸಾಧ್ಯವಿಲ್ಲ. ಕಾರ್ಬನ್ ಡೇಟಿಂಗ್ ಹೆಸರಿನಲ್ಲಿ ವಸ್ತು ಹಾನಿಗೊಳಗಾದರೆ, ಅದು ಸುಪ್ರೀಂ ಕೋರ್ಟ್ನ ಆದೇಶವನ್ನು ಧಿಕ್ಕರಿಸಿದಂತೆ ಆಗುತ್ತದೆ’ ಎಂದು ಪ್ರತಿಪಾದಿಸಿದ್ದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.