ಮನೆ ರಾಷ್ಟ್ರೀಯ ಕಾಂಗ್ರೆಸ್ ಚುನಾವಣೆಯಲ್ಲಿ ಖರ್ಗೆಗೆ ಗೆಹ್ಲೋಟ್ ಬೆಂಬಲ: ಅನ್ಯಾಯ ಎಂದ ತರೂರ್

ಕಾಂಗ್ರೆಸ್ ಚುನಾವಣೆಯಲ್ಲಿ ಖರ್ಗೆಗೆ ಗೆಹ್ಲೋಟ್ ಬೆಂಬಲ: ಅನ್ಯಾಯ ಎಂದ ತರೂರ್

0

ಬೋಪಾಲ್(Bhopal) : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೆಂಬಲಿಸಿದ್ದಾರೆ. ಇದು ಎದುರಾಳಿ ಅಭ್ಯರ್ಥಿ ಶಶಿ ತರೂರ್ ಅವರ ಕೆಂಗಣ್ಣಿಗೆ ಗುರಿಯಾಗಿದೆ.

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ತರೂರ್ ಮಾತನಾಡಿ, ಪಕ್ಷದ ಯಾವುದೇ ಪದಾಧಿಕಾರಿ, ಮುಖ್ಯಮಂತ್ರಿ ಅಥವಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸಬಾರದು ಅಥವಾ ಅವರ ಪರ ಪ್ರಚಾರ ಮಾಡಬಾರದು ಎಂಬ ಸ್ಪಷ್ಟ ಸೂಚನೆ ಇದೆ  ಎಂದು ತಿಳಿಸಿದ್ದಾರೆ.

ಅಕ್ಟೋಬರ್ 17ರಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ಸಂಸದ ಶಶಿ ತರೂರ್ ಕಣದಲ್ಲಿರುವ ಇಬ್ಬರು ಅಭ್ಯರ್ಥಿಗಳಾಗಿದ್ದಾರೆ.