ಮೈಸೂರು(Mysuru): ಅತಿಯಾದ ದುರಾಸೆಯಿಂದಾಗಿ ಭ್ರಷ್ಟಾಚಾರ ಎಲ್ಲೆಡೆಯೂ ಹೆಚ್ಚುತ್ತಿದೆ. ದುರಾಸೆ ಮೊದಲೂ ಇತ್ತು, ಈಗ ಇನ್ನಷ್ಟು ಜಾಸ್ತಿಯಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗಡೆ ಬೇಸರ ವ್ಯಕ್ತಪಡಿಸಿದರು.
ನಗರದಲ್ಲಿಂದು ಮಾತನಾಡಿದ ಸಂತೋಷ್ ಹೆಗಡೆ, ಭ್ರಷ್ಟಾಚಾರ ಮೊದಲಿನಿಂದಲೂ ಇದೆ. ಆದರೆ ಇತ್ತೀಚಿನ ದಿನಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಸಮಾಜದ ವಿವಿಧ ವಲಯಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಎಂದರು.
ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಪುನರ್ ಜಾರಿಗೊಳಿಸಿರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂತೋಷ್ ಹೆಗಡೆ, ಇದು ಸ್ವಾಗತಾರ್ಹ ಬೆಳವಣಿಗೆ. ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಜಾರಿಗೆ ತಂದಿದ್ದನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಸುಪ್ರೀಂ ಕೋರ್ಟ್ ಎಸಿಬಿ ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದಿದೆ. ಹಾಗಾಗಿ ಲೋಕಾಯುಕ್ತಕ್ಕೆ ಬಲ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕಿದೆ. ಲೋಕಾಯುಕ್ತ ಕೇಳುವ ಸಿಬ್ಬಂದಿಗಳನ್ನು ಸರ್ಕಾರ ನೇಮಕ ಮಾಡಬೇಕು. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಸಾಮರ್ಥ್ಯ ಲೋಕಾಯುಕ್ತಕ್ಕಿದೆ ಎಂದರು.
ಭ್ರಷ್ಟಾಚಾರ ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರ. ಯಾವುದೋ ಖಾಸಗಿ ವ್ಯಕ್ತಿಗಿಂತ, ಸರ್ಕಾರದೊಳಗಿದ್ದುಕೊಂಡು ಲಂಚ ಸ್ವೀಕರಿಸುವವರ ವಿರುದ್ಧ ಕ್ರಮ ಆಗಬೇಕು. ಇದಕ್ಕಾಗಿ ಲೋಕಾಯುಕ್ತ ಕಾಯ್ದೆಯ ಕೆಲವು ನಿಯಮಗಳು ಬದಲಾಗಬೇಕಿದೆ. ಲೋಕಾಯುಕ್ತ ಬಲಪಡಿಸಲು ಎಲ್ಲ ರೀತಿಯ ಅವಕಾಶಗಳು ಇವೆ. ಸರ್ಕಾರಕ್ಕೂ ಸಮಾಯಾವಕಾಶದ ಅಗತ್ಯವಿದೆ. ಕಾಲಾವಕಾಶ ಕೊಟ್ಟು ನೋಡೋಣ ಎಂದು ಹೇಳಿದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.