ಬೆಂಗಳೂರು(Bengaluru): ಸಂಪುಟ ವಿಸ್ತರಣೆ ಕುರಿತು ವರಿಷ್ಠರೊಂದಿಗೆ ಚರ್ಚಿಸಲು ಈ ವಾರವೇ ದೆಹಲಿಗೆ ಹೋಗಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸಂಪುಟ ವಿಸ್ತರಣೆ ಸದ್ಯದಲ್ಲಿಯೇ ಆಗಲಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೀಡಿರುವ ಹೇಳಿಕೆ ಬಗ್ಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಜನಸಂಕಲ್ಪ ಯಾತ್ರೆಯ ಮಧ್ಯೆಯೇ, ಪಕ್ಷದ ವರಿಷ್ಠರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ಕೊಟ್ಟ ತಕ್ಷಣವೇ ದೆಹಲಿಗೆ ಹೋಗುತ್ತೇನೆ ಎಂದು ಹೇಳಿದರು.
ಶಾಸಕ ರಮೇಶ ಜಾರಕಿಹೊಳಿ ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಅವರು ಅವರ ಕ್ಷೇತ್ರದ ಹಲವು ಕೆಲಸಕ್ಕೆ ಬಂದಿದ್ದರು. ಆರ್ಡಿಪಿಆರ್ ಮತ್ತು ಲೋಕೋಪಯೋಗಿ ರಸ್ತೆಗಳ ಬಗ್ಗೆ ಮಾತನಾಡಲು ಬಂದಿದ್ದರು ಎಂದರು.
ಒಕ್ಕಲಿಗ ಸಮುದಾಯಕ್ಕೆ ಶೇ 12ರಷ್ಟು ಮೀಸಲಾತಿ ನೀಡುವಂತೆ ನಿರ್ಮಲಾನಂದನಾಥ ಶ್ರೀಗಳು ಬೇಡಿಕೆ ಇಟ್ಟಿರುವ ಬಗ್ಗೆ ಮಾತನಾಡಿದ ಅವರು, ಯಾವುದೇ ಸಮುದಾಯ ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ. ಆದರೆ, ಅದಕ್ಕೆ ಕಾನೂನು ಚೌಕಟ್ಟಿದೆ. ಬೇರೆ ಬೇರೆ ತೀರ್ಪುಗಳಿವೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಇದೆ. ಅವುಗಳ ಆಧಾರದಲ್ಲಿ ಮಾಡಬೇಕಾಗುತ್ತದೆ ಎಂದರು.
ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ: ನಗರದ ಲುಲು ಗ್ಲೋಬಲ್ ಮಾಲ್ ಬಳಿ ಸೋಮವಾರ ಸಂಭವಿಸಿದ ಅಫಘಾತ ಯಾವ ಕಾರಣಕ್ಕೆ ನಡೆದಿದೆ ಎಂದು ತನಿಖೆ ನಡೆಸಿ ಪ್ರಾಥಮಿಕ ವರದಿ ನೀಡುವಂತೆ ಪೊಲೀಸರಿಗೆ ತಿಳಿಸಿದ್ದೇನೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಿದ್ದೇನೆ ಎಂದೂ ಮುಖ್ಯಮಂತ್ರಿ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.