ಮೈಸೂರು(Mysuru): ಸಂಸದೆ ಸುಮಲತಾ ಜೊತೆಯಲ್ಲಿ ಇರುವವರು ಭ್ರಷ್ಟಾತಿ ಭ್ರಷ್ಟರು. ಮೈಸೂರು – ಬೆಂಗಳೂರು ಹೈ ವೇ ಕಾಮಗಾರಿಯಲ್ಲಿ ನೂರಾರು ಕೋಟಿ ರೂ. ಅಕ್ರಮ ನಡೆದಿದೆ. ಆ ಅಕ್ರಮಗಳಲ್ಲಿ ಸಂಸದೆ ಸುಮಲತಾ ಬೆಂಬಲಿಗರು ಭಾಗಿಯಾಗಿದ್ದಾರೆ ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪಿಸಿದ್ದಾರೆ.
ಮಂಡ್ಯ ಜೆಡಿಎಸ್ ಶಾಸಕರು ಆಣೆ – ಪ್ರಮಾಣಕ್ಕೆ ಬರಲು ಸಂಸದೆ ಸುಮಲತಾ ಆಹ್ವಾನ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಂಸದೆ ಸುಮಲತಾ ಅಂಬರೀಶ್ ಕರೆದಾಕ್ಷಣ ಹೋಗಲಾಗುವುದಿಲ್ಲ. ಉತ್ತಮರು ಕರೆದ್ರೆ ಹೋಗಬಹುದು, ದೆವ್ವ ಕರೆದ್ರೆ ಹೋಗಲು ಆಗುತ್ತಾ? ದೆವ್ವದ ಬಾಯಲ್ಲಿ ಭಗವದ್ಗೀತೆ ಕೇಳಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
ಸಂಸದೆ ಸುಮಲತಾ ಏಟ್ರಿಯಾ ಹೋಟೆಲ್’ಗೆ ಏಕೆ ಹೋಗಿದ್ದರು? ಹೋಟೆಲ್’ನಲ್ಲಿ ಕುಳಿತು ಏನು ಮಾಡಿದರು ಎಂಬುದಕ್ಕೆ ವಿಡಿಯೋ ದಾಖಲೆಗಳಿವೆ. ಸೂಕ್ತ ಸಂದರ್ಭ ಬಂದಾಗ ಆ ವಿಡಿಯೋ ಬಿಡುಗಡೆ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.
ಈಗಾಗಲೇ ಸಂಸದೆ ಸುಮಲತಾ ವಿರುದ್ಧ ಜನರು ತಿರುಗಿ ಬಿದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಜನರೇ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಸಂಸದೆಯಾಗಿ ಸುಮಲತಾ ಅವರ ಸಾಧನೆ ಶೂನ್ಯ. ಜನರು ಇವರನ್ನು ಸಂಸದರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಮರುಕ ಪಡುತ್ತಿದ್ದಾರೆ ಎಂದು ಕಿಡಿ ಕಾರಿದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.