ಮೈಸೂರು(Mysuru): ವಿಧಾನ ಪರಿಷತ್ ಸದಸ್ಯರಾದ ಸಿ ಪಿ ಯೋಗೇಶ್ವರ್ ಅವರು ಚನ್ನಪಟ್ಟಣ ತಾಲ್ಲೂಕಿನ ಅಂಬೇಡ್ಕರ್ ಭವನ ಮತ್ತು ವಾಲ್ಮೀಕಿ ಭವನಕ್ಕೆ ಬಿಡುಗಡೆ ಆಗಿರುವ ಹಣವನ್ನು ತಡೆಹಿಡುಯುವಂತೆ ಮುಖ್ಯ ಮಂತ್ರಿಗಳಿಗೆ ಪತ್ರ ಬರೆಯುವುದನ್ನು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಖಂಡಿಸುತ್ತದೆ ಎಂದು ಅಧ್ಯಕ್ಷ ದ್ಯಾವಪ್ಪ ನಾಯಕ ತಿಳಿಸಿದರು.
ಚನ್ನಪಟ್ಟಣ ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನರಿಗೆ ನೀಡುವ ಅಂಬೇಡ್ಕರ್ ಭವನ ಮತ್ತು ವಾಲ್ಮೀಕಿ ಭವನದ ಅನುದಾನವನ್ನು ತಡೆಹಿಡಿಯಲು ಮಾನ್ಯ ಮುಖ್ಯಮಂತ್ರಿ ಗಳಿಗೆ ಪತ್ರ ಬರೆದು ಕೋರಿರುವ ಉದ್ದೇಶವೇನೂ.? ಸದಾ ದಲಿತರ ಪರ ಎನ್ನುವ ಸರ್ಕಾರವೂ ಇವರ ವಿರುದ್ಧ ಸೂಕ್ತ ಕ್ರಮ ವಹಿಸಬೇಕು.
ದಲಿತರ ಉದ್ದಾರಕ್ಕೆ ಮೀಸಲಾಗಿರುವ ಹಣದಲ್ಲಿ ಭವನ ನಿರ್ಮಿಸುವುದು ಸರ್ಕಾರದ ಕರ್ತವ್ಯ. ಆದರೆ ಸರ್ಕಾರದ ಪ್ರತಿನಿಧಿ ಯಾಗಿ ಇಂತಹ ಪತ್ರ ಬರೆದಿರುವುದು ಏಕೆ.? ಇದರ ಮರ್ಮ ಏನು ಎಂಬುದನ್ನು ತಿಳಿಸಿಬೇಕು. ಈ ಕೂಡಲೇ ಸ್ಪಷ್ಟೀಕರಣ ಕೊಡಬೇಕು.
ಸಿ ಪಿ ಯೋಗೇಶ್ವರ್ ಅವರು ಈ ಕೂಡಲೇ ದಲಿತರ ಕ್ಷಮೆ ಕೋರಿ, ಪತ್ರವನ್ನು ವಾಪಸ್ ತೆಗೆದುಕೊಳ್ಳಬೇಕು.ಇಲ್ಲದೆ ಹೋದರೆ ಎಸ್ ಸಿ,ಎಸ್ ಟಿ ಸಮುದಾಯದ ಜನರು ಇಡೀ ರಾಜ್ಯದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಂತರ ದೇವರಾಜ್ ಮಾತನಾಡಿ ಸಿಪಿ ಯೋಗೇಶ್ ರವರು ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ.ದಲಿತರು ಸಿಪಿ ಯೋಗೇಶ್ವರ್ ರವರಿಗೆ ಯಾವ ಅನ್ಯಾಯ ಮಾಡಿದ್ದಾರೆ.
ಅನುದಾನ ತಡೆಹಿಡಿಯುವಂತೆ ಸಿಎಂಗೆ ಪತ್ರ ಬರೆದಿರುವುದು ಎಷ್ಟರ ಮಟ್ಟಿಗೆ ಸರಿ.ಈ ಕೂಡಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಹುಣಸೂರು, ಹದಿನಾರು ಪ್ರಕಾಶ್, ಕೆರಹಳ್ಳಿ ಮಾದೇಶ, ಚೆನ್ನನಾಯಕ ಪಾಳೇಗಾರ ದೇವರಾಜ ಶಿವು ಇದ್ದರು.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.