ಮನೆ ಸುದ್ದಿ ಜಾಲ ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ: ಮೈಸೂರಿನಲ್ಲಿ ಸಿಹಿ ಹಂಚಿ ಸಂಭ್ರಮಾಚಾರಣೆ

ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ: ಮೈಸೂರಿನಲ್ಲಿ ಸಿಹಿ ಹಂಚಿ ಸಂಭ್ರಮಾಚಾರಣೆ

0

ಮೈಸೂರು(Mysuru): ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಕ್ಕೆ ಕರ್ನಾಟಕ ರಾಜ್ಯ ಸಂವಿಧಾನ ರಕ್ಷಣಾ ಸಮಿತಿಯ ಸದಸ್ಯರು ಇಲ್ಲಿನ ಮಾನಂದವಾಡಿ ರಸ್ತೆಯಲ್ಲಿರುವ  ಡಾ.ಬಿ.ಆರ್.ಅಂಬೇಡ್ಕರ್‌ ಪುತ್ಥಳಿ ಬಳಿ ಬುಧವಾರ ಸಿಹಿ ಹಂಚಿ ಸಂಭ್ರಮ ಆಚರಿಸಿದರು.

ಸಮಿತಿಯ ಅಧ್ಯಕ್ಷ ಎನ್.ಭಾಸ್ಕರ್ ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಅವರಿಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮ ಆಚರಿಸಿದರು.

ಆದಿ ಕರ್ನಾಟಕ ಮಹಾಸಂಸ್ಥೆ ಮುಖಂಡರಾದ ಶಿವಸ್ವಾಮಿ, ವೆಂಕಟಸ್ವಾಮಿ, ತಿರುಮಲಸ್ವಾಮಿ, ಅಶೋಕಪುರಂ ಆದಿ ಕರ್ನಾಟಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಕೆ.ಮುರಳಿ, ಕಾರ್ಯದರ್ಶಿ ಎಂ.ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡರಾದ ಎಸ್.ನವೀನ್ ಕುಮಾರ್, ಮಹಾದೇವ, ವಿಜಯ್ ಕುಮಾರ್, ಎಂ.ಜೆ.ರವೀಂದ್ರ, ಪುಟ್ಟದಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಧರ್, ಸಂತೋಷ್ ಪಿ., ರಾಮು, ಡಿಸಿಸಿ ಪದಾಧಿಕಾರಿಗಳಾದ ಸಿದ್ದಲಿಂಗಪುರ ಪ್ರವೀಣ್, ರಾಹುಲ್ ಕುಂಬರಹಳ್ಳಿ ಭಾಗವಹಿಸಿದ್ದರು.