ಮನೆ ಅಪರಾಧ ಬೆಳಗಾವಿ: ಎಸ್’ಎಸ್’ಎಲ್’ಸಿ ವಿದ್ಯಾರ್ಥಿಯ ಭೀಕರ ಕೊಲೆ

ಬೆಳಗಾವಿ: ಎಸ್’ಎಸ್’ಎಲ್’ಸಿ ವಿದ್ಯಾರ್ಥಿಯ ಭೀಕರ ಕೊಲೆ

0

ಬೆಳಗಾವಿ(Belagavi): ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಬೆನ್ನಿಗೆ ಮಾರಕಾಸ್ತ್ರದಿಂದ ಇರಿದು, ಬಳಿಕ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬೀಕರವಾಗಿ ಕೊಲೆಗೈದಿರುವ ಘಟನೆ‌ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಶಿವಾಜಿ ನಗರ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ (16) ಕೊಲೆಯಾದವ.

ವಿದ್ಯಾರ್ಥಿ ನಾಪತ್ತೆಯಾದ ಕುರಿತು ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದರು. ಬೆಳಗಾವಿಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತನ ಧರಿಸಿದ್ದ ಶಾಲಾ ಸಮವಸ್ತ್ರದಿಂದ ಗುರುತು ಪತ್ತೆಯಾಗಿದೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅರೆಬೆತ್ತಲೆ ಸ್ಥಿತಿಯಲ್ಲಿ ಮೃತದೇಹ ದೊರೆತಿದೆ. ನಿನ್ನೆ ರಾತ್ರಿಯೇ ಕೊಲೆ ಮಾಡಿರುವ ಶಂಕೆ ಇದೆ.

ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ಗಿರೀಶ್ ಹಾಗೂ ಶ್ವಾಸನಾಳದ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದರು. ಬೆಳಗಾವಿ ತಾಲೂಕಿನ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.