ಮೈಸೂರು(Mysuru): ನಗರದ ಮಹಾರಾಣಿ ವಿಜ್ಞಾನ ಕಾಲೇಜಿನ ಪಾರಂಪರಿಕ ಕಟ್ಟಡ ಶುಕ್ರವಾರ ಬೆಳಿಗ್ಗೆ ಕುಸಿದಿದ್ದು, ಪ್ರಾಂಶುಪಾಲರು ಹಾಗೂ ವಿಭಾಗದ ಮುಖ್ಯಸ್ಥರ ಮುನ್ನೆಚ್ಚರಿಕೆ ಕ್ರಮದಿಂದಾಗಿ ಭಾರಿ ಅನಾಹುತ ತಪ್ಪಿದೆ.
ಕಾಲೇಜಿನ ರಸಾಯನ ವಿಜ್ಞಾನದ ಪ್ರಯೋಗಾಲಯದ ಕೊಠಡಿ ಕುಸಿದುಬಿದ್ದಿದೆ.
ವಿದ್ಯಾರ್ಥಿಗಳು 10.30ರ ವೇಳೆಗೆ ಪ್ರಯೋಗಾಲಯದ ಕೊಠಡಿಗೆ ಹಾಜರಾಗುವವರಿದ್ದರು. ಈ ವೇಳೆ ಗೋಡೆಯಲ್ಲಿ ಬಿರುಕು ಮೂಡಿದ್ದನ್ನು ಗಮನಿಸಿದ ವಿಭಾಗದ ಮುಖ್ಯಸ್ಥ ಕೆ.ಕೆ.ಪದ್ಮನಾಭ 10.15ರ ವೇಳೆ ಪ್ರಾಂಶುಪಾಲರ ಗಮನಕ್ಕೆ ತಂದರು.
ಕೊಠಡಿಗೆ ಬಂದ ಪ್ರಾಂಶುಪಾಲ ಡಾ.ಡಿ.ರವಿ ಅವರು ಕೊಠಡಿಗೆ ಬೀಗ ಹಾಕಿಸಿದ್ದಲ್ಲದೆ, ಎಲೆಕ್ಟ್ರಿಕ್ ಸಂಪರ್ಕವನ್ನು ಕಡಿತಗೊಳಿಸಿ ಕಟ್ಟಡದ ಒಳಗೆ ಯಾರೂ ಪ್ರವೇಶಿಸದಂತೆ ಸೂಚಿಸಿದರು. ಕಟ್ಟಡದ ಮೆಟ್ಟಿಲಿಳಿಯುತ್ತಿದ್ದಂತೆಯೇ ಪ್ರಯೋಗಾಲಯದ ಭಾಗವು ಕುಸಿದಿದೆ.
ಪಾರಂಪರಿಕ ಕಟ್ಟಡದ ದುರಸ್ತಿ ಕಾಮಗಾರಿಯ ಭೂಮಿಪೂಜೆ ಅ.23ರ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಕಳೆದ ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬಿರುಕುಗಳು ಹೆಚ್ಚಾಗಿದ್ದವು ಎಂದು ಪ್ರಾಂಶುಪಾಲ ಡಾ.ರವಿ ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.