ನವದೆಹಲಿ(NewDelhi): ಒಂಬತ್ತು ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ರಾಜೀನಾಮೆ ಸಲ್ಲಿಸುವಂತೆ ಕೇರಳ ರಾಜ್ಯದ ರಾಜ್ಯಪಾಲರಾದ ಆರೀಫ್ ಮೊಹಮ್ಮದ್ ಖಾನ್ ಅವರು ಆದೇಶಿಸಿದ್ದಾರೆ.
ಈ ಪೈಕಿ ಕ್ಯಾಲಿಕಟ್, ಸಂಸ್ಕೃತ, ಕೆಟಿಯು, ಸಿಯುಎಸ್ ಎಟಿ, ಮೀನುಗಾರಿಕೆ ಮಲಯಾಳಂ, ಎಂಜಿ, ಕಣ್ಣೂರು, ಹಾಗೂ ವೈದ್ಯಕೀಯ ವಿಶ್ವವಿದ್ಯಾಲಯಗಳ ಕುಲಪತಿಗಳು ಸೇರಿದ್ದಾರೆ.
ಸರ್ವೋಚ್ಛ ನ್ಯಾಯಾಲಯದ ನಾಗರೀಕ ಮನವಿ ಸಂಖ್ಯೆ 2022ರ 7634 -7635 ಎಸ್ಎಲ್ಪಿ(ಸಿ) ಸಂಖ್ಯೆ 21108 -21109 -2021)ರ ಆದೇಶವನ್ನು ಎತ್ತಿಹಿಡಿಯುತ್ತಾ ರಾಜ್ಯಪಾಲ ಆರೀಫ್ ಮೊಹಮ್ಮದ್ ಅವರು ಸೂಚನೆ ನೀಡಿದ್ದಾರೆ.
ತಿರುವನಂತಪುರಂನಲ್ಲಿರುವ ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ನೇಮಕಗೊಂಡಿದ್ದಂತಹ ಕುಲಪತಿಗಳ ವಿಚಾರದಲ್ಲಿ ಮಾನ್ಯ ಸರ್ವೊಚ್ಛ ನ್ಯಾಯಾಲಯವು ಆ ನೇಮಕಾತಿ ಕಾನೂನುಬಾಹಿರ ಮತ್ತು ಯುಜಿಸಿ ನಿಬಂಧನೆಗಳಿಗೆ ವಿರುದ್ಧವಾಗಿದೆ ಎಂದು ಸೂಚಿಸಿ ಆ ನೇಮಕಾತಿಯನ್ನು ರದ್ದು ಪಡಿಸಿತು.
ನ್ಯಾಯಾಧೀಶರಾದ ಎಂ.ಆರ್. ಷಾ ಮತ್ತು ಸಿ.ಟಿ. ರವಿಕುಮಾರ್ ಅವರನ್ನೊಳಗೊಂಡ ಪೀಠವು, ಯೂನಿವರ್ಸಿಟಿ ಗ್ರ್ಯಾಂಡ್ ಕಮೀಷನ್ ನ ಪ್ರಕಾರ, ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟಿದ್ದಂತಹ ಪರಿಶೋಧನಾ ಸಮಿತಿಯು, ಇಂಜಿನಿಯರಿಂಗ್ ವಿಜ್ಞಾನ ಕ್ಷೇತ್ರವನ್ನೂ ಒಳಗೊಂಡಂತೆ ಕುಲಪತಿಗಳ ಹುದ್ದೆಗೆ ಕನಿಷ್ಠ ಮೂರು ಸಮರ್ಥ ಅಭ್ಯರ್ಥಿಗಳನ್ನು ಗುರುತಿಸಿ ಶಿಫಾರಸ್ಸು ಮಾಡಬೇಕಿತ್ತು. ಆದರೆ ಕೇವಲ ಡಾ. ರಾಜಶ್ರೀ ಎಂ.ಎಸ್. ಅವರ ಹೆಸರನ್ನು ಮಾತ್ರ ಕಳುಹಿಸಲಾಗಿತ್ತು ಎಂದು ತಿಳಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.