ಮನೆ ಸುದ್ದಿ ಜಾಲ ಚಾಣಕ್ಯತನದಿಂದ ಜೇನುಗೂಡಿಗೆ ಕಲ್ಲು ಹೊಡೆಯದಂತ ಮೀಸಲಾತಿ ಹೆಚ್ಚಳ, ಸಿಎಂ ಬೊಮ್ಮಾಯಿ: ಆರ್.ಅಶೋಕ್

ಚಾಣಕ್ಯತನದಿಂದ ಜೇನುಗೂಡಿಗೆ ಕಲ್ಲು ಹೊಡೆಯದಂತ ಮೀಸಲಾತಿ ಹೆಚ್ಚಳ, ಸಿಎಂ ಬೊಮ್ಮಾಯಿ: ಆರ್.ಅಶೋಕ್

0

ಬೆಂಗಳೂರು(Bengaluru): ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಣಕ್ಯತನದಿಂದ ಜೇನುಗೂಡಿಗೆ ಕಲ್ಲು ಹೊಡೆಯದಂತ ಮೀಸಲಾತಿ ಹೆಚ್ಚಳದ ಬಗ್ಗೆ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

 ಗಂಡೆದೆ ಇರುವವರು ಮಾತ್ರ ಮೀಸಲಾತಿ ಕೊಡಲು ಸಾಧ್ಯ. ಆ ಗಂಡೆದೆಯನ್ನು ತೋರಿಸಿದವರು ಸಿಎಂ ಬಸವರಾಜ ಬೊಮ್ಮಾಯಿ ಎಂದು ಹಾಡಿ ಹೊಗಳಿದರು.

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಆರ್.ಅಶೋಕ್, ಸಿಎಂ ಬೊಮ್ಮಾಯಿ  ಮೆಂಟಲಿ ಪ್ರಿಪೇರ್ ಆಗಿ ಇದನ್ನು ಮಾಡಿದ್ದಾರೆ. ಚಾಣಕ್ಯ ವಿದ್ಯೆ ಕಲಿತವರು ಸಿಂ ಬೊಮ್ಮಾಯಿ . ಎಂದು ಹೇಳಿದರು.

ಹಿಂದಿನ ಸರ್ಕಾರಗಳು ಮೀಸಲಾತಿ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ನಮಗೆ ಜೇನುಗೂಡಿಗೆ ಕಲ್ಲು ಹೊಡೆದಂತಾಗುತ್ತದೆ ಎಂದಿದ್ದರು. ಆದರೆ ನಾವು ಎಸ್ ಸಿ ಎಸ್ ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದೇವೆ. ಗಂಡೆದೆ ಇರುವವರಿಂದ ಮಾತ್ರ ಇದು ಸಾಧ್ಯ ಎಂದು ಸಚಿವ ಅಶೋಕ್ ತಿಳಿಸಿದರು.