ಮನೆ ಅಪರಾಧ ಗುಂಡ್ಲುಪೇಟೆ: ಕಾಲು ಜಾರಿ ಕೆರೆಗೆ ಬಿದ್ದ ವ್ಯಕ್ತಿ ಸಾವು

ಗುಂಡ್ಲುಪೇಟೆ: ಕಾಲು ಜಾರಿ ಕೆರೆಗೆ ಬಿದ್ದ ವ್ಯಕ್ತಿ ಸಾವು

0

ಗುಂಡ್ಲುಪೇಟೆ(Gudlupete): ಪಟ್ಟಣದ ಹೊರ ವಲಯದಲ್ಲಿರುವ ವಿಜಯಪುರ ಅಮ್ಮಾನಿಕೆರೆಗೆ ಕಾಲು ಜಾರಿ ಬಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ.

ಪಟ್ಟಣದ ಕೆ.ಎಸ್.ನಾಗರತ್ನಮ್ಮ ಬಡಾವಣೆಯ ರಾಜು(35) ಮೃತ ವ್ಯಕ್ತಿ.

ಈತ ವಿಜಯಪುರ ಅಮ್ಮಾನಿಕೆರೆಯಲ್ಲಿ ಸ್ಥಾನ ಮಾಡಲು ಹೋಗಿ ಕೆರೆಯ ತಟದ ಚಾನಲ್ ಬಳಿ ಬಟ್ಟೆ ತೊಳೆಯುತ್ತಿದ್ದ ಸಂದರ್ಭದಲ್ಲಿ ಕೆರೆಗೆ ಇಳಿದಿದ್ದಾನೆ. ಆ ವೇಳೆ ಕೆಸರಿನಲ್ಲಿ ಕಾಲು ಸಿಕ್ಕಿ ಹಾಕಿಕೊಂಡು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಮೃತ ವ್ಯಕ್ತಿ ಬಾರ್ ಬೆಂಡಿಂಗ್ ಕೆಲಸ ಮಾಡಿಕೊಂಡಿದ್ದ ಎನ್ನಲಾಗುತ್ತಿದೆ.

ವಿಷಯ ತಿಳಿದ ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತದೇಹವನ್ನು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಯ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

ಈ ಕುರಿತು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.